ಆಕಸ್ಮಿಕ ಬೆಂಕಿಗೆ ಆಹುತಿಯಾದ ಖಾಸಗಿ ಬಸ್; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Prasthutha|

ಹುಬ್ಬಳ್ಳಿ: ಪೂನಾದಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಸ್ ಹೊತ್ತಿ ಉರಿದ ಘಟನೆ ಭಾನುವಾರ ನಗರದ ಹುಬ್ಬಳ್ಳಿ-ಧಾರವಾಡ ಬೈಪಾಸ್ ಬಳಿಯ ಕಾರವಾರ ರಸ್ತೆಯಲ್ಲಿ ನಡೆದಿದೆ.

- Advertisement -


ರೇಷ್ಮಾ ಟ್ರಾವೆಲ್ಸ್ ಕಂಪನಿಯ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಚಾಲಕ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿದ್ದಾರೆ. ಕೆಲವೇ ಸಮಯದಲ್ಲಿ ಬಸ್’ಗೆ ಬೆಂಕಿ ಆವರಿಸಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಟೈರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ ಎಂದು ಬಸ್ ಮಾಲಕರು ತಿಳಿಸಿದ್ದಾರೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಬಸ್’ನಲ್ಲಿ ಪರ್ಫ್ಯೂಮ್ ಸ್ಪ್ರೇಯರ್ ಸಾಗಾಟ ಸಹ ನಡೆಯುವುದರಿಂದ, ಉಷ್ಣತೆಗೆ ಅದರಲ್ಲಿರುವ ಗ್ಯಾಸ್ ಸ್ಫೋಟಗೊಳ್ಳುವ ಸಾಧ್ಯತೆಯಿದೆ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ಹೇಳುತ್ತಾರೆ. ಎರಡು ತಾಸು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ‌ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp