ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸಾವು; ಹಲವರಿಗೆ ಗಾಯ

Prasthutha|

ಯಾದಗಿರಿ: ವೇಗವಾಗಿ ಹೋಗುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಯಾದಗಿರಿ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಇಂದು ಮುಂಜಾನೆ ನಡೆದಿದೆ.

- Advertisement -


ಖಾಸಗಿ ಬಸ್‌ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಬಸ್ ಬೆಂಗಳೂರಿನಿಂದ ಸುರಪುರ ಮಾರ್ಗವಾಗಿ ಹುಮ್ನಾಬಾದ್ ಕಡೆ ಚಲಿಸುತ್ತಿತ್ತು. ಬಸ್ ಓವರ್ ಸ್ಪೀಡ್ ಇದ್ದ ಕಾರಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕವಡಿಮಟ್ಟಿ ಬಳಿ ಪಲ್ಟಿಯಾಗಿದೆ.


ಬಸ್ ಪಲ್ಟಿಯಾದ ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. ಬಸ್ ಪಲ್ಟಿಯ ರಭಸಕ್ಕೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

- Advertisement -


ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪಲ್ಟಿಯಾದ ಬಸ್ ತೆರವುಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯರ ನೆರವಿನೊಂದಿಗೆ ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp