ಉಪವಾಸ ಸತ್ಯಾಗ್ರಹ ಆರಂಭಿಸಿದ ಬಂಧನದಲ್ಲಿರುವ ಪ್ರಿಯಾಂಕಾ ಗಾಂಧಿ

Prasthutha|

ಲಕ್ನೋ: ಕಾರು ಹರಿಸಿ ರೈತರನ್ನು ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಪ್ರತಿಭಟಿಸಲು ಉತ್ತರ ಪ್ರದೇಶದ ಲಖಿಂಪುರ–ಖೇರಿಗೆ ತೆರಳುತ್ತಿದ್ದಾಗ ಸೀತಾಪುರ ಜಿಲ್ಲೆಯಲ್ಲಿ ಬಂಧನಕ್ಕೊಳಗಾಗಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅತಿಥಿಗೃಹವೊಂದರಲ್ಲಿ ಇರಿಸಲಾಗಿದ್ದು, ಅಲ್ಲೇ ಅವರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

- Advertisement -

ವಾದ್ರಾ ಬಂಧನ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಉತ್ತರ ಪ್ರದೇಶದಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಿಯಾಂಕಾ ಇರುವ ಅತಿಥಿಗೃಹದ ಹೊರಭಾಗದಲ್ಲೂ ಧರಣಿ ನಡೆಯುತ್ತಿದೆ.

ಈ ಮಧ್ಯೆ ಪ್ರಿಯಾಂಕಾ ಗಾಂದಿ ಅವರು ತಾವಿರುವ ಕೊಠಡಿಯ ಕಸ ಗುಡಿಸುತ್ತಿರುವ 45 ಸೆಕೆಂಡ್‌ಗಳ ವಿಡಿಯೊವನ್ನು ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ವಿಕಾಸ್ ಶ್ರೀವಾಸ್ತವ ಬಿಡುಗಡೆ ಮಾಡಿದ್ದರು.

- Advertisement -

ದೃಶ್ಯಗಳು ವೈರಲ್‌ ಆಗುತ್ತಿದ್ದಂತೆ, ಉತ್ತರ ಪ್ರದೇಶದ ವಕ್ತಾರ ಅಖಿಲೇಶ್ ಸಿಂಗ್ ಸೇರಿದಂತೆ ಹಲವು ನಾಯಕರು ರಸ್ತೆಯನ್ನು ಗುಡಿಸಿ ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿಯೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಜಾಥಾ ಹಮ್ಮಿಕೊಂಡಿದ್ದಾರೆ.

Join Whatsapp