ಕನ್ನಡ ಪರ ಹೋರಾಟಗಾರರ ಬಂಧನ; ರಾಜಕೀಯ ಪ್ರಭಾವದ ದುರ್ಬಳಕೆ: ಡಾ. ಎಚ್ ಸಿ ಮಹದೇವಪ್ಪ

Prasthutha|

ಬೆಂಗಳೂರು: ಪುಸ್ತಕ ಪರಿಷ್ಕರಣೆಯ ವಿರುದ್ಧ ಹೋರಾಟದಲ್ಲಿ ಪಾಲ್ಗೊಂಡಿದ್ದ ಕನ್ನಡ ಪರ ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿರುವುದು ರಾಜಕೀಯ ಪ್ರಭಾವದ ದುರ್ಬಳಕೆ ಎಂದು ಮಾಜಿ ಸಚಿವ ಡಾ. ಎಚ್ ಸಿ ಮಹಾದೇವಪ್ಪ ಅಸಮಾಧಾನ ವ್ಯಕ್ತಪಡಿಸಿದರು.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪೂರ್ವಾಗ್ರಹ ಪೀಡಿತ ಪಠ್ಯ ಪುಸ್ತಕ ಪರಿಷ್ಕರಣೆಯ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿದ್ದ ಕನ್ನಡ ಪರ ಹೋರಾಟಗಾರರಾದ ದೀಪು ಮತ್ತು ಭೈರಪ್ಪ ಹರೀಶ್ ಕುಮಾರ್ ಅವರ ಮೇಲೆ ಗೃಹ ಸಚಿವರು ರಾಜಕೀಯ ಪ್ರಭಾವ ಬಳಸಿ ಸುಳ್ಳು ಪ್ರಕರಣ ದಾಖಲಿಸಿ ಅವರನ್ನು ರೌಡಿ ಶೀಟರ್ ಪಟ್ಟಿಗೆ ಸೇರಿಸಲು ಹೊರಟಿರುವುದು ಅತ್ಯಂತ ಖಂಡನೀಯ ಸಂಗತಿ ಎಂದು ಹೇಳಿದರು.

Join Whatsapp