Home ಟಾಪ್ ಸುದ್ದಿಗಳು ಎಸ್ ಆರ್ ವಿಶ್ವನಾಥ್ ಹತ್ಯೆ ಸಂಚಿನ ಕುರಿತು ತನಿಖೆ, ಶಾಸಕರಿಗೆ ಹೆಚ್ಚಿನ ಭದ್ರತೆ: ಗೃಹ ಸಚಿವ...

ಎಸ್ ಆರ್ ವಿಶ್ವನಾಥ್ ಹತ್ಯೆ ಸಂಚಿನ ಕುರಿತು ತನಿಖೆ, ಶಾಸಕರಿಗೆ ಹೆಚ್ಚಿನ ಭದ್ರತೆ: ಗೃಹ ಸಚಿವ ಜ್ಞಾನೇಂದ್ರ

ಶಿವಮೊಗ್ಗ : ಶಾಸಕ ಎಸ್ ಆರ್ ವಿಶ್ವನಾಥ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ವಿಷಯವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಬಗ್ಗೆ, ಸೂಕ್ತ ತನಿಖೆ ನಡೆಸಲಾಗುವುದು ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ” ಈ ಬಗ್ಗೆ ಸ್ವತಃ ವಿಶ್ವನಾಥ್ ಅವರು ನನ್ನ ಜೊತೆ ಮಾತನಾಡಿದ್ದಾರೆ” ಎಂದೂ ಹೇಳಿದ್ದಾರೆ. ” ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ” ಎಂದೂ ಅವರು ಹೇಳಿದ್ದಾರೆ. ಶಾಸಕರ ಮನವಿಯಂತೆ, ಹೆಚ್ಚಿನ ಭದ್ರತೆ ಒದಗಿಸಲಾಗುವುದು, ಎಂದೂ ಸಚಿವರು, ಹೇಳಿದ್ದಾರೆ.

Join Whatsapp
Exit mobile version