ಪ್ರೊ. ಸಿ.ಆರ್.ಗೋವಿಂದರಾಜು ಹೃದಯಾಘಾತದಿಂದ ನಿಧನ

Prasthutha|

ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್‌ ಪ್ರೊ. ಸಿ.ಆರ್‌. ಗೋವಿಂದರಾಜು (53) ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.

- Advertisement -

ಭಾನುವಾರ ಮಧ್ಯಾಹ್ನ ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ಮತಗಟ್ಟೆಯಲ್ಲಿ ಮತ ಚಲಾಯಿಸಿ ಮನೆಗೆ ತೆರಳಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ತಕ್ಷಣವೇ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಗೋವಿಂದರಾಜು ಬೆಂಗಳೂರಿನವರು. ಪತ್ನಿ, ಇಬ್ಬರು ಹೆಣ್ಣು ಮಕ್ಕಳಿದ್ದಾರೆ.. ಸೋಮವಾರ ನಗರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಎಂಟು ಪುಸ್ತಕ, ಐದು ಸಂಶೋಧನಾ ಲೇಖನಗಳನ್ನು ಬರೆದಿದ್ದರು. ವಿಶ್ವವಿದ್ಯಾಲಯದಲ್ಲಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

Join Whatsapp