ಪ್ರವಾದಿ ನಿಂದನೆ: ಟೈಮ್ಸ್ ನೌ ನಿರೂಪಕಿ ವಿರುದ್ಧದ ಎಫ್ ಐಆರ್ ಗಳನ್ನು ದೆಹಲಿಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್

Prasthutha|

ನವದೆಹಲಿ: ಪ್ರವಾದಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಟೈಮ್ಸ್ ನೌ ನಿರೂಪಕಿ ನವಿಕಾ ಕುಮಾರ್ ಅವರ ವಿರುದ್ಧ ದಾಖಲಾಗಿರುವ ಮತ್ತು ಭವಿಷ್ಯದಲ್ಲಿ ದಾಖಲಾಗುವ ಎಲ್ಲಾ ಎಫ್ ಐಆರ್ ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಶುಕ್ರವಾರ ಆದೇಶ ನೀಡಿದೆ.

- Advertisement -

ಚಾನೆಲ್ ಚರ್ಚೆಯಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಬಿಜೆಪಿ ಮುಖಂಡೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಟೈಮ್ಸ್ ನೌ ನಿರೂಪಕಿ ನಾವಿಕಾ ಕುಮಾರ್ ಅವರ ವಿರುದ್ಧ ದಾಖಲಾಗಿರುವ ಮತ್ತು ಭವಿಷ್ಯದಲ್ಲಿ ದಾಖಲಾಗುವ ಎಲ್ಲಾ ಎಫ್ ಐಆರ್ ಗಳನ್ನು ದೆಹಲಿ ಪೂಲ್ಸ್ ನ ಐಎಫ್ ಎಸ್ ಒ ಘಟಕಕ್ಕೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.

ದೆಹಲಿ ಪೊಲೀಸ್ ಐಎಫ್ ಎಸ್ ಒ ಘಟಕವು ದಾಖಲಿಸಿರುವ ಎಫ್ ಐಆರ್ ಅನ್ನು ಪ್ರಮುಖ ಪ್ರಕರಣವಾಗಿ ತೆಗೆದುಕೊಳ್ಳಲಾಗುತ್ತದೆ

- Advertisement -

ಪ್ರಸ್ತುತ ಎಫ್ ಐಆರ್ ಗಳು ಅಥವಾ ಭವಿಷ್ಯದಲ್ಲಿ ದಾಖಲಾಗಬಹುದಾದ ಎ ಎಫ್ ಐಆರ್ ಗಳಿಗೆ ಸಂಬಂಧಿಸಿದಂತೆ ನವಿಕಾ ಕುಮಾರ್ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳಲಾಗುವುದಿಲ್ಲ. ಎಫ್ ಐಆರ್ ಗಳನ್ನು ರದ್ದುಗೊಳಿಸುವ ಪರಿಹಾರವನ್ನು ಕೋರಿ ದೆಹಲಿ ಹೈಕೋರ್ಟ್ ಗೆ ಹೋಗಲು ಆಕೆಗೆ ಸ್ವಾತಂತ್ರ್ಯವಿದೆ. ಈ ವಿಷಯದ ಅರ್ಹತೆಗಳ ಬಗ್ಗೆ ತಾನು ಏನನ್ನೂ ವ್ಯಕ್ತಪಡಿಸಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಕೃಷ್ಣ ಮುರಾರಿ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್ 16ರಂದು ಈ ವಿಷಯದಲ್ಲಿ ಆದೇಶಗಳನ್ನು ಕಾಯ್ದಿರಿಸಿತ್ತು.

Join Whatsapp