Home ಟಾಪ್ ಸುದ್ದಿಗಳು ವೇಶ್ಯಾವಾಟಿಕೆ ಆರೋಪಿ ಸ್ಯಾಂಟ್ರೋ ರವಿ ಆತ್ಮಹತ್ಯೆ ಯತ್ನ: ಕಾಂಗ್ರೆಸ್

ವೇಶ್ಯಾವಾಟಿಕೆ ಆರೋಪಿ ಸ್ಯಾಂಟ್ರೋ ರವಿ ಆತ್ಮಹತ್ಯೆ ಯತ್ನ: ಕಾಂಗ್ರೆಸ್

ಬೆಂಗಳೂರು: ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಜೆಪಿ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಎಂದು ಕರ್ನಾಟಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.


ಈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಸ್ಯಾಂಟ್ರೋ ರವಿಯೊಳಗೆ ಅಡಗಿದ್ದ ಬಿಜೆಪಿಗರ ಭಯಂಕರ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಸರ್ಕಾರ? ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾನಂತೆ ಎಂದು ಬರೆದುಕೊಂಡಿದೆ.


ಇದು ಆತ್ಮಹತ್ಯೆ ಯತ್ನವೋ, ಕೊಲೆ ಯತ್ನವೋ? ಎಂದು ಪ್ರಶ್ನಿಸಿರುವ ಕಾಂಗ್ರೆಸ್, ಸ್ಯಾಂಟ್ರೋ ರವಿಯನ್ನು ಮುಗಿಸುವ ಮೂಲಕ ಸರ್ಕಾರದ ರಹಸ್ಯಗಳನ್ನೂ ಮುಗಿಸುವ ಹುನ್ನಾರ ನಡೆದಿದೆಯೇ ಮುಖ್ಯಮಂತ್ರಿ ಬೊಮ್ಮಾಯಿಯವರೇ ಎಂದು ಹೇಳಿದೆ.

Join Whatsapp
Exit mobile version