ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳ ರಕ್ಷಣೆ: ಯುವತಿ ನೀರುಪಾಲು

Prasthutha|

ಉಡುಪಿ, ಆ.1: ಬೀಚ್ ನಲ್ಲಿ ಆಟವಾಡುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿದ್ದು, ಈ ಪೈಕಿ ಮೂವರನ್ನು ರಕ್ಷಿಸಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ನಡೆದಿದೆ.

- Advertisement -


ಸ್ಥಳೀಯ ರಕ್ಷಣಾ ಕಾರ್ಯಕರ್ತರು ಮೂವರನ್ನು ರಕ್ಷಿಸಿದ್ದು, ಓರ್ವ ವಿದ್ಯಾರ್ಥಿನಿಗಾಗಿ ಹುಡುಕಾಟ ಮುಂದುವರೆದಿರುವುದಾಗಿ ತಿಳಿದು ಬಂದಿದೆ.

ಮೈಸೂರಿನಿಂದ ಆಗಮಿಸಿದ್ದ ಬಿಎಸ್ಸಿ ವಿದ್ಯಾರ್ಥಿಗಳು ಸಮುದ್ರದ ಅಲೆಗಳ ಮಧ್ಯೆ ಆಟವಾಡುತ್ತಿದ್ದರು. ಈ ಸಂದರ್ಭ ಸ್ಥಳೀಯರು ಅಪಾಯದ ಬಗ್ಗೆ ಸೂಚನೆ ನೀಡಿದ್ದಾರೆ. ಆದರೆ ಇದನ್ನು ಲೆಕ್ಕಿಸದೇ ನೀರಿನಲ್ಲಿ ಆಟವಾಡುತ್ತಿದ್ದಾಗ ವಿದ್ಯಾರ್ಥಿಗಳು ನೀರುಪಾಲಾಗಿದ್ದಾಗಿ ಸ್ಥಳೀಯರು ತಿಳಿಸಿದ್ದಾರೆ. ಸದ್ಯ ನೀರುಪಾಲಾದ ಯುವತಿ ದೇಜಮ್ಮ ಎಂಬಾಕೆಯ ಹುಡುಕಾಟ ಮುಂದುವರೆದಿದೆ.

Join Whatsapp