ಅಲ್ಪಸಂಖ್ಯಾತರ ಮೇಲೆ ಹಲ್ಲೆ, ಕಿರುಕುಳ ಖಂಡಿಸಿ ಪ್ರತಿಭಟನೆ ಜಾಥಾ

Prasthutha|

ಬೆಂಗಳೂರು: ರಾಜ್ಯದೆಲ್ಲೆಡೆ ಕ್ರೈಸ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ, ಕ್ರೈಸ್ತ ಚರ್ಚ್ ಗಳಿಗೆ ನುಗ್ಗಿ ಹಲ್ಲೆಗಳನ್ನು ಮಾಡಿ ಸುಳ್ಳು ಕೇಸುಗಳನ್ನು ದಾಖಲಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮತಾಂತರ ನಿಷೇಧ ಕಾಯ್ದೆಗಳನ್ನು ತರಬಾರದು ಎಂದು ಒತ್ತಾಯಿಸಿ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು.

- Advertisement -

ಚಂದಾಪುರ ವೃತ್ತದಿಂದ ಆನೇಕಲ್ ಪಟ್ಟಣದ ತಾಲೂಕು ಕಚೇರಿವರೆಗೆ ಸುಮಾರು 12 ಕಿ.ಮೀ. ವರೆಗೆ ನಡೆದ ಬೃಹತ್ ಜಾಥಾದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮಂದಿ ದಲಿತ ಕ್ರೈಸ್ತರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಪಾಲ್ಗೊಂಡಿದ್ದರು. ಜಾಥಾದಲ್ಲಿ 10 ಸಾವಿರಕ್ಕೂ ಅಧಿಕ ಜನರು ಸೇರಿದ್ದರು.

ಕರ್ನಾಟಕ ಕ್ರೈಸ್ತ ಸಂಘಟನೆ, ದಲಿತ ಕ್ರೈಸ್ತ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಒಕ್ಕೂಟ ವತಿಯಿಂದ ಈ ಪ್ರತಿಭಟನೆ ಜಾಥಾ ಹಮ್ಮಿಕೊಳ್ಳಲಾಗಿತ್ತು. ಆನೇಕಲ್ ತಾಲೂಕು ಕಚೇರಿಯಲ್ಲಿ ದಂಡಾಧಿಕಾರಿಗೆ ಮನವಿ ಅರ್ಪಿಸಿ ಜಾಥಾ ಕೊನೆಗೊಳಿಸಲಾಯಿತು.

- Advertisement -

ನಂತರ ಆನೇಕಲ್ ಪಟ್ಟಣದ ರಾಮ ಕುಟೀರದಲ್ಲಿ ಕಾರ್ಯಕ್ರಮ ನಡೆಸಿದ ಪ್ರತಿಭಟನಕಾರರು, ಮತಾಂತರ ವಿಚಾರದಲ್ಲಿ ಕ್ರೈಸ್ತರಿಗೆ ಅನ್ಯಾಯವಾಗುತ್ತಿದೆ. ಹಲವೆಡೆ ಚರ್ಚ್ ಗಳಿಗೆ ನುಗ್ಗಿ ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸರಕಾರ ಕೂಡಲೇ ಎಚ್ಚೆತ್ತುಕೊಂಡು ನಮಗೆ ನ್ಯಾಯ ದೊರಕಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹೋರಾಟದಲ್ಲಿ ಅನೇಕ ದಲಿತ ಸಂಘಟನೆಯ ಮುಖಂಡರು ಕ್ರೈಸ್ತ ಪಾದ್ರಿಗಳು ಕ್ರೈಸ್ತ ಹೋರಾಟಗಾರರು ಮತ್ತು ರಾಜ್ಯದಲ್ಲೆಡೆ ಪ್ರತಿಭಟನಾ ಮೆರವಣಿಗೆ ಮಾಡುತ್ತಿರುವ ಕ್ರೈಸ್ತರ ಪರ ಧ್ವನಿಯಾಗಿರುವ ಕರ್ನಾಟಕ ಕ್ರೈಸ್ತ ಸಂಘಟನೆ ಸಂಸ್ಥಾಪಕರು ಅಧ್ಯಕ್ಷರು ಆಗಿರುವ ಸ್ಟ್ಯಾನಿ ಪಿಂಟೋ ಅವರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ಮಾತ್ರವಲ್ಲದೆ ಸಂಘಟನೆಯ ಬಹಳಷ್ಟು ಸದಸ್ಯರು ಪಾಲ್ಗೊಂಡಿದ್ದರು.

ವರದಿ – ಜಾನ್ಸನ್ ಕೊಡಗು

Join Whatsapp