ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಖಂಡಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಬಂಟ್ವಾಳದಲ್ಲಿ ಮೌನ ಪ್ರತಿಭಟನೆ

Prasthutha|

ಮಂಗಳೂರು : ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನದ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್, ದ.ಕ ಜಿಲ್ಲಾ ಸಮಿತಿ ವತಿಯಿಂದ ಬಂಟ್ವಾಳದಲ್ಲಿ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ಪ್ರತಿಭಟನಾಕಾರರು “ಜೊತೆಯಾಗಿ ಖಂಡಿಸೋಣ, ದಮನಿತರ ದ್ವನಿಯಾಗೋಣ”, “ಸರಕಾರವನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕಾಗಿದೆ” “WE STAND WITH DISHA RAVI” ಯಂತಹ ಅನೇಕ ಪ್ಲೇ ಕಾರ್ಡ್ ಗಳನ್ನು ಪ್ರದರ್ಶಿಸಿದರು.

ವಿಮೆನ್ ಇಂಡಿಯಾ ಮೊಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನಸ್ರಿಯ ಬೆಳ್ಳಾರೆ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಆಯಿಷ ಬಜ್ಪೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹನಾ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷೆ ಮರಿಯಮ್ಮ, ಜಿಲ್ಲಾ ಕೋಶಾಧಿಕಾರಿ ಝುಲೈಖ, ಜಿಲ್ಲಾ ಸಮಿತಿ ಸದಸ್ಯರುಗಳಾದ ಸಂಶಾದ್, ಸಜರ, ಮಮ್ತಾಜ್, ಸಜೀಪಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪೌಸ್ತೀನ್ ಡಿ ಸೋಜ ಹಾಗೂ ಉಪಾಧ್ಯಕ್ಷೆ ಸಬಿನಾ, ಮಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೇಮ ಹಾಗೂ ಸಜಿಪನಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಫೌಝಿಯಾ, ಅಡ್ಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ದಿಲ್ಸಾದ್ ಸೇರಿದಂತೆ ಹಲವಾರು ಕಾರ್ಯಕರ್ತೆಯರು ಈ ವೇಳೆ ಉಪಸ್ಥಿತರಿದ್ದರು.

Join Whatsapp