ಹಿಜಾಬ್ ತೀರ್ಪು ವಿರೋಧಿಸಿ ಮಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಮನ್ವಯ ಸಮಿತಿಯಿಂದ ಭಿತ್ತಿ ಪತ್ರ ಪ್ರದರ್ಶನ

Prasthutha|

ಮಂಗಳೂರು: ಹಿಜಾಬ್ ವಿರುದ್ಧವಾಗಿ ಹೈಕೋರ್ಟ್ ನೀಡಿರುವ ತೀರ್ಪು ಸಾಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಇದನ್ನು ಒಪ್ಪಲು ಸಾಧ್ಯವಿಲ್ಲ. ಹೈಕೋರ್ಟ್ ಈ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಮಂಗಳೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಮನ್ವಯ ಸಮಿತಿ ವತಿಯಿಂದ ಭಿತ್ತಿ ಪತ್ರ ಪ್ರದರ್ಶಿಸಿ ವಿಶ್ವವಿದ್ಯಾನಿಲಯದ ಮುಂಭಾಗ ಪ್ರತಿಭಟನೆ ನಡೆಯಿತು.
ಈ ಸಂಧರ್ಭದಲ್ಲಿ ವಿದ್ಯಾರ್ಥಿ ಸಮನ್ವಯ ಸಮಿತಿ ಚೆಯರ್ ಮ್ಯಾನ್ ರಿಯಾಝ್ ಅಂಕತಡ್ಕ, ಕನ್ವಿನರ್ ಅಶಾಮ್, ಮಾಧ್ಯಮ ವಕ್ತಾರರಾದ ಜಾಬಿರ್ ಮುಬಶ್ಶೀರ್, ಸದಸ್ಯರಾದ ಶಫೀಕ್, ಮುಕ್ತಾರ್, ಝಾಹಿದ್, ಅತೀದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Join Whatsapp