ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಪ್ರತಿಭಟನೆ: ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ !

Prasthutha|

ಮೈಸೂರು: ಶಾಸಕ  ಪ್ರಿಯಾಂಕ್ ಖರ್ಗೆ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯರ ಬಗ್ಗೆ ಸಂಸದ ಪ್ರತಾಪ್ ಸಿಂಹ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.  ಕೂಡಲೆ ಸಂಸದ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ದಲಿತ ಸಂಘಟನೆಗಳ ಒಕ್ಕೂಟ ಸಮಿತಿಯ ಸದಸ್ಯರು ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.

- Advertisement -

ಪ್ರಿಯಾಂಕ್ ಎಂಬ ಪದಕ್ಕೆ ಅರ್ಥ ತಿಳಿಯದ ಪ್ರತಾಪಸಿಂಹ ಅವರಿಗೆ ಸಾಮಾನ್ಯ ಜ್ಞಾನವೇ ಇಲ್ಲ. ಅರೆಹುಚ್ಚರಂತೆ, ಅಜ್ಞಾನಿಯಾಗಿ ಮಾತನಾಡಿದ್ದಾರೆ. ಒಂದು ವೇಳೆ ಕ್ಷಮೆ ಯಾಚಿಸದಿದ್ದರೆ ಮುಂದೆ ಪ್ರತಾಪಸಿಂಹ ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮದಲ್ಲೂ ಘೇರಾವ್ ಹಾಕುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.

ಅಲ್ಲದೆ ಪ್ರತಾಪ್ ಸಿಂಹ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ವ್ಯಕ್ತಪಡಿಸಿ, ಪ್ರತಾಪ್ ಸಿಂಹ ದಲಿತ ವಿರೋಧಿ ಎಂದು ಕಿಡಿಕಾರಿದ್ದಾರೆ.

Join Whatsapp