ಗಾಂಧೀಜಿ ಹತ್ಯೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ; ನಾಯಕರ ಬಂಧನ

Prasthutha|

ಮಂಗಳೂರು: ಜನವರಿ 30 ಆರೆಸ್ಸೆಸ್ ನಡೆಸಿದ ಮಹಾತ್ಮ ಗಾಂಧೀಜಿಯ ಹತ್ಯೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಯೋಜಿಸಿದ ಪ್ರತಿಭಟನೆಯನ್ನು ತಡೆದ ಪೊಲೀಸರು ನಾಯಕರನ್ನು ವಶಕ್ಕೆ ಪಡೆದ ಘಟನೆ ಇಂದು ವಿಟ್ಲದಲ್ಲಿ ನಡೆದಿದೆ.

- Advertisement -

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ‘ಗಾಂಧೀಜಿಯನ್ನು ಕೊಂದ ಆರೆಸ್ಸೆಸ್’ ಎಂಬ ಶೀರ್ಷಿಕೆ ಅಡಿಯಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡ ಕಾರ್ಯಕ್ರಮದ ಭಾಗವಾಗಿ ಇಂದು ವಿವಿಧ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಿತ್ತು.

ಇದರ ಅಂಗವಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿಟ್ಲ ತಾಲೂಕು ಸಮಿತಿ, ವಿಟ್ಲದ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿ ಸಂಘಪರಿವಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಮತ್ತು ನಾಯಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆದ್ಯೊಯ್ದಿದ್ದಾರೆ ಎಂದು ಹೇಳಲಾಗಿದೆ.

- Advertisement -

ವಿದ್ಯಾರ್ಥಿ ಮುಖಂಡರನ್ನು ಅಕ್ರಮವಾಗಿ ಬಂಧಿಸಿದ ವಿಟ್ಲ ಪೊಲೀಸರ ನಡೆಯನ್ನು ಖಂಡಿಸಿರುವ ಕ್ಯಾಂಪಸ್ ಫ್ರಂಟ್, ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಇಲಾಖೆಯನ್ನು ಆಗ್ರಹಿಸಿದ್ದಾರೆ

Join Whatsapp