ಕೋಮು ದ್ವೇಷ ಹರಡಿದ ಪಬ್ಲಿಕ್ ಟಿವಿ ಕಚೇರಿ ಮುಂದೆ ಪ್ರತಿಭಟನೆ

Prasthutha|

►►ಟಿವಿ9, ಸುವರ್ಣ ಟಿವಿ ಕಚೇರಿಯೆಡೆಗೆ ತೆರಳುತ್ತಿದ್ದ ಪ್ರತಿಭಟನಕಾರರ ಬಂಧನ

- Advertisement -

ಬೆಂಗಳೂರು: ಕನ್ನಡದ ಸುದ್ದಿ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆತು ಜನರನ್ನು ದಾರಿ ತಪ್ಪಿಸುತ್ತಿರುವ ಹಿನ್ನಲೆಯಲ್ಲಿ ಅವರ ಕರ್ತವ್ಯವನ್ನು ನೆನಪಿಸಲು ಬೆಂಗಳೂರಿನ ಸಮಾನ ಮನಸ್ಕರ ಗುಂಪು ಕನ್ನಡ ಸುದ್ದಿ ಮಾಧ್ಯಮಗಳ ಎದುರು ಪ್ರತಿಭಟನೆ ನಡೆಸಿದೆ.


ಸತ್ಯಾಗ್ರಹವು ಬೆಳಿಗ್ಗೆ 09:30ಕ್ಕೆ ಪಬ್ಲಿಕ್ ಟಿವಿ ಕಚೇರಿಯಿಂದ ಪ್ರಾರಂಭವಾಗಿ, ನಂತರ 11:30ಕ್ಕೆ ಸುವರ್ಣ ಟಿವಿ ಕಚೇರಿಯ ಮುಂದೆ ತಲುಪಿ, ಅದರ ನಂತರ ಮಧ್ಯಾಹ್ನ 2 ಗಂಟೆಗೆ ಬಿಟಿವಿ ಕಚೇರಿ ಬಳಿ ತೆರಳಿ, ಸಂಜೆ 4 ಗಂಟೆಗೆ ಟಿವಿ9 ಕಚೇರಿ ಮುಂದೆ ಸೇರಲಿತ್ತು. ಆದರೆ ಸತ್ಯಾಗ್ರಹಿಗಳು ಪಬ್ಲಿಕ್ ಟಿವಿ ಮುಂದೆ ತೆರಳಿ ಅಲ್ಲಿನ ಮಾಧ್ಯಮ ಸಿಬ್ಬಂದಿಗೆ ಆಗ್ರಹಗಳ ಮನವಿ ಪತ್ರ ಸಲ್ಲಿಸಿ ಸುವರ್ಣ ಟಿವಿ ಕಚೇರಿಗೆ ತೆರಳುತ್ತಿದ್ದಾಗ, ಹೈಗ್ರೌಂಡ್ ಪೊಲೀಸರು ಸತ್ಯಾಗ್ರಹಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Join Whatsapp
Exit mobile version