ದೆಹಲಿಯಲ್ಲಿ ಬಂಧಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳ ಬಿಡುಗಡೆಗೆ ಒತ್ತಾಯಿಸಿ ಶ್ರೀಲಂಕಾದಲ್ಲಿ ಪ್ರತಿಭಟನೆ

Prasthutha|

ಕೊಲಂಬೊ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರನ್ನು ಬೆಂಬಲಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ಭಾರತೀಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದ್ದು, ಇದನ್ನು ವಿರೋಧಿಸಿ ಕೊಲಂಬೊದ ಭಾರತೀಯ ಹೈಕಮಿಷನ್ ಎದುರು ವಿದ್ಯಾರ್ಥಿ ಸಮೂಹ ಪ್ರತಿಭಟನೆ ನಡೆಸಿದೆ.

- Advertisement -

ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟನ್ನು ವಿರೋಧಿಸಿ ಅಲ್ಲಿನ ಜನತೆ ಬೀದಿಗಿಳಿದು ಹೋರಾಟ ನಡೆಸಿದ ಪರಿಣಾಮ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ ಅವರು ಪದಚ್ಯುತಗೊಂಡಿದ್ದರು.

ಈ ಮಧ್ಯೆ ಶ್ರೀಲಂಕಾ ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಭಾರತೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಇದೀಗ ಅವರನ್ನು ಬಂಧಿಸಲಾಗಿದೆ. ಸದ್ಯ ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸಿ ಶ್ರೀಲಂಕಾ ವಿದ್ಯಾರ್ಥಿಗಳು ಕೊಲಂಬೊದಲ್ಲಿ ಭಾರತೀಯ ಹೈಕಮಿಷನ್ ಎದುರು ಪ್ರತಿಭಟನೆ ನಡೆಸಿದ್ದಾರೆ.

Join Whatsapp