Home ಟಾಪ್ ಸುದ್ದಿಗಳು ಒಳ ಮೀಸಲಾತಿ ವಿರುದ್ಧ ಎರಡನೇ ದಿನವೂ ಶಿವಮೊಗ್ಗದಲ್ಲಿ ಪ್ರತಿಭಟನೆ, ರಸ್ತೆ ತಡೆ

ಒಳ ಮೀಸಲಾತಿ ವಿರುದ್ಧ ಎರಡನೇ ದಿನವೂ ಶಿವಮೊಗ್ಗದಲ್ಲಿ ಪ್ರತಿಭಟನೆ, ರಸ್ತೆ ತಡೆ

ಶಿವಮೊಗ್ಗ: ಒಳಮೀಸಲಾತಿ ವಿರೋಧಿಸಿ ಬಂಜಾರ ಸಮುದಾಯ ನಡೆಸುತ್ತಿರುವ ಹೋರಾಟ ಮುಂದುವರಿಸಿದ್ದು, ಶಿವಮೊಗ್ಗ ತಾಲೂಕು ಕುಂಚೇನಹಳ್ಳಿಯಲ್ಲಿ ಬಂಜಾರ ಸಮುದಾಯದವರು ಒಳಮೀಸಲು ಜಾರಿ ವಿರೋಧಿಸಿ ಮಂಗಳವಾರ ರಸ್ತೆ ತಡೆ ನಡೆಸಿದ್ದಾರೆ.
ಪ್ರತಿಭಟನಾಕಾರರು ರಸ್ತೆಯಲ್ಲಿ ಬೆಂಕಿ ಹಚ್ಚಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಅವುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಶಿಕಾರಿಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಾಟ ಮಾಡಲಾಗಿತ್ತು.

Join Whatsapp
Exit mobile version