ನ್ಯಾಯಾಧೀಶರ ವಿರುದ್ಧ ಎಫ್ ಐ ಆರ್ ದಾಖಲಿಸುವವರೆಗೂ ಧರಣಿ: ದಲಿತ ಸಂಘಟನೆಗಳ ಒಕ್ಕೂಟ

Prasthutha|

ರಾಯಚೂರು: ಗಣರಾಜ್ಯೋತ್ಸವ ದಿನದಂದು ನಡೆದ ಘಟನೆಗೆ ದಲಿತ ಸಂಘಟನೆಗಳ ಒಕ್ಕೂಟ ತೀವ್ರ ಖಂಡನೆ ವ್ಯಕ್ತಪಡಿಸಿವೆ. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರ ವಿರುದ್ಧ ಎಫ್ ಐ ಆರ್ ದಾಖಲಿಸುವವರೆಗೂ ಧರಣಿ ಮುಂದುವರಿಸಲಾಗುವುದು ಎಂದು ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ದೂರು ದಾಖಲಿಸಲು ಹಿಂದೆ ಮುಂದೆ ನೋಡುವುದು ಸರಿಯಲ್ಲ. ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಳ್ಳಲು ಸಂವಿಧಾನದಲ್ಲಿ ಅವಕಾಶವಿದೆ. ಧ್ವಜಾರೋಹಣ ಸಂದರ್ಭದಲ್ಲಿ ನಡೆದ ಘಟನೆಯನ್ನು ನೆರೆದವರೆಲ್ಲರೂ ನೋಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲು ಅವಕಾಶ ಕೊಟ್ಟಂತಾಗುತ್ತದೆ ಎಂದು ಎಂ ಸಂಘಟನೆಯ ಮುಖಂಡ ವಿರೂಪಾಕ್ಷಿ ಹೇಳಿದರು.
“ಸಂವಿಧಾನಕ್ಕೆ ಅವರು ಅವಮಾನ ಮಾಡಿದ್ದಾರೆ. ದೂರು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಕಳುಹಿಸುವುದು ಪೊಲೀಸರ ಕೆಲಸ. ಉದ್ದೇಶಪೂರ್ವಕವಾಗಿ ಎಫ್ಐಆರ್ ಮಾಡಲು ವಿಳಂಬ ಮಾಡಲಾಗಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದರಿಂದ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು.ನ್ಯಾಯಾಲಯದಲ್ಲಿ ಗಣೇಶ ಹಾಗೂ ಸರಸ್ವತಿ ಫೋಟೊ ಹಾಕುವುದು ಕೂಡಾ ಕೋರ್ಟ್ ಶಿಷ್ಟಾಚಾರದ ಉಲ್ಲಂಘನೆಯಾಗಿದೆ. ಗಣರಾಜ್ಯೋತ್ಸವ ಸಮಾರಂಭ ನಡೆದಿರುವುದು ನ್ಯಾಯಾಲಯದ ಹೊರಗಡೆ, ನ್ಯಾಯಾಲಯದ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಅಳವಡಿಸಬೇಕು ಎನ್ನುವ ಸಂಗತಿಯು ಎಲ್ಲಾ ಕೋರ್ಟ್ನಲ್ಲಿದೆ. ಒಂದು ವಾರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಹೋರಾಟಗಾರ ಆರ್.ಮಾನಸಯ್ಯ ಒತ್ತಾಯಿಸಿದರು.
ರವೀಂದ್ರ ಪಟ್ಟಿ, ಅಂಬಣ್ಣ ಅರೋಲಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Join Whatsapp