ಚಿಕ್ಕಮಗಳೂರು: ಯುವಕನಿಗೆ ಮೂತ್ರ ನೆಕ್ಕಿಸಿದ್ದ PSI ಅರ್ಜುನ್ ಬಂಧನ

Prasthutha|

ಚಿಕ್ಕಮಗಳೂರು: ಮಹಿಳೆಗೆ ಕರೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿ ಠಾಣೆಗೆ ಕರೆದೊಯ್ದು ಪರಿಶಿಷ್ಟ ಸಮುದಾಯದ ಯುವಕನೊಬ್ಬನಿಗೆ ಮೂತ್ರ ನೆಕ್ಕಿಸಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಗೋಣಿಬೀಡು ಠಾಣೆ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಅವರನ್ನು CID ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

- Advertisement -

ಠಾಣೆಗೆ ಕರೆದೊಯ್ದು ಥಳಿಸಿ ವ್ಯಕ್ತಿಯೊಬ್ಬರಿಂದ ತನ್ನ ಬಾಯಿಗೆ ಮೂತ್ರ ಹೊಯ್ಯಿಸಿ ನೆಲದ ಮೇಲೆ ಬಿದ್ದಿದ್ದ ಮೂತ್ರವನ್ನೂ ನೆಕ್ಕಿಸಿದ್ದರು ಎಂದು ಆರೋಪಿಸಿ ಮೂಡಿಗೆರೆ ತಾಲೂಕಿನ ಕಿರಗುಂದದ ಯುವಕ ಕೆ.ಎಲ್. ಪುನೀತ್, ಗೊಣಿಬೀಡು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ PSI ಅರ್ಜುನ್ ವಿರುದ್ಧ FIR ದಾಖಲಾಗಿತ್ತು.  

ಮೇ 10 ರಂದು ಈ ಪ್ರಕರಣ ನಡೆದಿದ್ದು, PSI ವಿರುದ್ದ ಮೇ 22 ರಂದು ದೂರು ದಾಖಲಾಗಿತ್ತು . ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅರ್ಜುನ್, ನಿರೀಕ್ಷಣಾ ಜಾಮೀನು ಕೋರಿ ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಧೀಶ ಕೆ.ಎಲ್.ಅಶೋಕ್ ವಜಾಗೊಳಿಸಿದ್ದರು.

- Advertisement -

ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಡಿಜಿಪಿ ಬಿ.ಎಸ್.ಸಂಧು ಮಾರ್ಗದರ್ಶನದಲ್ಲಿ ತನಿಖೆ ಆರಂಭಿಸಿದ್ದ ಎಸ್ಪಿ ರವಿ ಚನ್ನಣ್ಣನವರ್ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿದೆ.

Join Whatsapp