ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದ ಪಿಎಸ್‌ ಐ ಸಾವು: ಇದು ಲೂಟಿ ಸರ್ಕಾರ ಎಂದ ಅಶೋಕ್‌

Prasthutha|

ಬೆಂಗಳೂರು: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌ ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

- Advertisement -

ಯಾದಗಿರಿ ಪಿಎಸ್‌ಐ ಪರಶುರಾಮ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒತ್ತಡದ ಮೇಲೆಯೇ ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಪರಶುರಾಮ್ ಅವರ ಸಾವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.



Join Whatsapp