ಪಿಎಸ್ಐ ಅಕ್ರಮದ ಕಿಂಗ್‌ ಪಿನ್
ಆರ್ ಡಿ ಪಾಟೀಲ್ ಜೈಲಿನಿಂದ ಬಿಡುಗಡೆ

Prasthutha|

- Advertisement -

ಬೆಂಗಳೂರು: ಸಬ್ ಇನ್ಸ್‌ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮದ ಕಿಂಗ್‌ ಪಿನ್ ಆರ್ ಡಿ ಪಾಟೀಲ್ ನಿನ್ನೆ ಮಧ್ಯರಾತ್ರಿ ಕಲಬುರಗಿಯ ಸೆಂಟ್ರಲ್ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ಕಲಬುರಗಿ ಹೈ ಕೋರ್ಟ್ ಮೂರು ದಿನಗಳ ಹಿಂದೆ ಕಿಂಗ್ ಪಿನ್ ಸಹೋದರರಾದ ಆರ್.ಡಿ.ಪಾಟೀಲ್ ಮತ್ತು ಮಹಾಂತೇಶ ಪಾಟೀಲ್ ಗೆ ಜಾಮೀನು ನೀಡಿತ್ತು. ಅದರಂತೆ ಮಹಾಂತೇಶ ಎರಡು ದಿನಗಳ ಹಿಂದೆ ಹೊರ ಬಂದಿದ್ದರು.


ಆರ್. ಡಿ .ಪಾಟೀಲ್ ವಿರುದ್ಧ ಒಂಬತ್ತು ಪ್ರಕರಣಗಳಿರುವುದರಿಂದ ಅವುಗಳಲ್ಲಿ ಕೆಳ ನ್ಯಾಯಾಲಯದಲ್ಲಿ ಗುವಿವಿ ಠಾಣೆ ಮತ್ತು ಸೆನ್ ಠಾಣೆಯಲ್ಲಿನ ಕೇಸ್ ಗೆ ಸಂಬಂಧಿಸಿದಂತೆ ವಾರೆಂಟ್ ಇದ್ದವು. ಈ ಕಾರಣಕ್ಕೆ ಆರ್.ಡಿ.ಬಿಡುಗಡೆ ಆಗಿರಲಿಲ್ಲ..

- Advertisement -


ಹೈಕೋರ್ಟ್ ಜಾಮೀನು ನೀಡಿದ ಆದೇಶ ಪ್ರತಿಯೊಂದಿಗೆ ಅವರ ಪರ ವಕೀಲರಾದ ಅಶೋಕ ಮೂಲಗೆ ಅವರು ವಾರೆಂಟ್ ರಿ ಕಾಲ್ ಮಾಡಲು ಜೆಎಂಎಫ್ ಸಿ ನ್ಯಾಯಾಲಯ ಮುಂದೆ ಕೋರಿಕೊಂಡು ಆ ಪ್ರಕ್ರಿಯೆ ಮುಗಿಸಿದರು. ಬಳಿಕ ಶ್ಯೂರಿಟ್ ನೀಡುವುದು ಇತ್ಯಾದಿ ಕಾರ್ಯ ಮುಗಿದ ನಂತರ ನಿನ್ನೆ ತಡರಾತ್ರಿ ಜೈಲಿನಿಂದ ಆರ್ ಡಿ ಪಾಟೀಲ್ ಹೊರ ಬಂದಿದ್ದಾನೆ.
ಮಹಾಂತೇಶ ಪಾಟೀಲ್ ಬಿಡುಗಡೆಯಾದ ಹೊತ್ತಿನಲ್ಲಿ ಸಂಭ್ರಮಿಸಿದ್ದು ವಿವಾದ ಆಗಿತ್ತು. ಇದು ಹಾಗೆ ಆಗಬಾರದು ಎಂಬ ಕಾರಣಕ್ಕೆ ಯಾರಿಗೂ ಮಾಹಿತಿ ನೀಡದೆ ಜೈಲಿನಿಂದ ನೇರವಾಗಿ ತಮ್ಮ ಆಪ್ತರೊಂದಿಗೆ ಮನೆಗೆ ತೆರಳಿದ್ದಾರೆ.


ಜೈಲಿನಿಂದ ಬಿಡುಗಡೆಯಾಗಿದ್ದು ತನ್ನನ್ನ ಕಾಣಲು ಮನೆ ಕಚೇರಿಗೆ ಯಾರು ಬರಬೇಡಿ ಎಂದು ಆರ್ ಡಿಪಿ ಸಂದೇಶ ರವಾನೆ ಮಾಡಿದ್ದು, ಫೇಸ್‌ಬುಕ್‌ ಖಾತೆ ಇನ್ನಿತರ ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿದ್ದಾರೆ.


ನನ್ನ ಅಭಿಮಾನಿಗಳು ಹಿತೈಷಿಗಳು ನನ್ನನ್ನು ಕಾಣಲು ಕಾತುರದಿಂದ ಕಾಯುತ್ತಿದ್ದಿರಿ. ನನ್ನನ್ನು ವಿಜೃಂಭಣೆಯಿಂದ ಸ್ವಾಗತಿಸಲು ಖರ್ಚು ವೆಚ್ಚ ಮಾಡಿಕೊಂಡಿದ್ದೀರಿ.
ಆದರೆ ವೈಯಕ್ತಿಕ ಕೆಲಸದಿಂದ ಕಲಬುರಗಿಯಿಂದ ಹೊರಗಡೆ ಹೋಗಿದ್ದೇನೆ. ಒಂದು ವಾರದಲ್ಲಿ ಅಫಜಲಪುರಕ್ಕೆ ಬಂದು ನಿಮ್ಮ ಸೇವೆಯಲ್ಲಿ ತೋಡಗಿಕೊಳ್ಳುವುದಾಗಿ ಸಂದೇಶ ನೀಡಿದ್ದಾರೆ

Join Whatsapp