ಪಿಎಸ್​ಐ ನೇಮಕಾತಿ ಅಕ್ರಮ: ಮತ್ತೊಬ್ಬ ಪಿಎಸ್‌ಐ ಸೆರೆ

Prasthutha|

ಬೆಂಗಳೂರು: ಸುಮಾರು 545 ಮಂದಿ ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ
ಏಜೆಂಟ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಮುಂಬೈನಲ್ಲಿ ಬಂಧಿಸಲಾಗಿದೆ.

- Advertisement -

ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ ಷರೀಫ್​ ಕಲಿಮಠ್​ ಬಂಧಿತ ಆರೋಪಿಯಾಗಿದ್ದಾನೆ. ಹಗರಣ ಹೊರಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಪಿಎಸ್‌ಐ ಷರೀಫ್, ಮುಂಬೈನಲ್ಲಿ ಅಡಗಿಕೊಂಡಿದ್ದರು. ಬೆಂಗಳೂರು ಸಿಐಡಿ ಪೊಲೀಸ್ ತಂಡ ಮುಂಬೈನಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದಿದೆ.

ಪೊಲೀಸ್ ಕಸ್ಟಡಿಗೆ:

- Advertisement -

ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿ ಶರೀಫ್ ನನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್​ ಕಸ್ಟಡಿಗೆ ನೀಡುವಂತೆ ಸಿಐಡಿ ಪೊಲೀಸರು ಕೋರ್ಟ್​ಗೆ ಮನವಿ ಮಾಡಿಕೊಂಡಿದ್ದಾರೆ. ಸಿಐಡಿ ಮನವಿ ಹಿನ್ನೆಲೆ ಆರೋಪಿ ಶರೀಫ್ ಕಲಿಮಠ್ ನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಆಗಸ್ಟ್ 8 ರವರೆಗೆ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಒಂದನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸಿಐಡಿ ಬಂಧಿತ ಆರೋಪಿ ಎಸ್ ಡಿಎ ಹರ್ಷಾ ಮತ್ತು ಕೆಲ ಅಭ್ಯರ್ಥಿಗಳೊಂದಿಗೆ ಪಿಎಸ್​ಐ ಷರೀಫ್​ ಕಲಿಮಠ್​ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈತ 10 ಅಭ್ಯರ್ಥಿಗಳ ಅಕ್ರಮ ನೇಮಕಾತಿಯಲ್ಲಿ ಮಧ್ಯವರ್ತಿಯಾಗಿದ್ದ. ಈ ಹಿನ್ನೆಲೆಯಲ್ಲಿ ಆರೋಪಿ ಷರೀಫ್ ನನ್ನು ವಶಕ್ಕೆ ಪಡೆದ ಸಿಐಡಿ ಪೊಲೀಸರು ಗ್ರಿಲ್ ಮುಂದುವರೆಸಿದ್ದಾರೆ.



Join Whatsapp