ಪಿಎಸ್ ಐ ನೇಮಕಾತಿ ಅಕ್ರಮ: ತಲೆಮರೆಸಿಕೊಂಡಿದ್ದ ದಂಪತಿ ಬಂಧನ

Prasthutha|

ಬೆಂಗಳೂರು: ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಎರಡು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಪಿಎಸ್ ಐ ಅಭ್ಯರ್ಥಿ ಶಾಂತಿಬಾಯಿ ಹಾಗೂ ಬಸಯ್ಯ ನಾಯಕ್ ಬಂಧಿತ ದಂಪತಿಯಾಗಿದ್ದು, ಅವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ನಿವಾಸಿಯಾಗಿರುವ ಶಾಂತಿಬಾಯಿ, ಮಂಜುನಾಥ್ ಮೇಳಕುಂದಿ ಸಹಕಾರದಿಂದ ಪಾಸಾಗಿದ್ದು, ಬಂಧಿತ ಜ್ಯೋತಿ ಪಾಟೀಲ್ ಮೂಲಕ ಮಂಜುನಾಥ್ ಮೇಳಕುಂದಿಯೊಂದಿಗೆ ಹಣದ ವ್ಯವಹಾರ ನಡೆಸಿದ್ದ ಮಾಹಿತಿ ಲಭ್ಯವಾಗಿದೆ.

- Advertisement -

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಶಾಂತಿಬಾಯಿ ಹಾಗೂ ಬಸಯ್ಯ ನಾಯಕ್ ನಾಪತ್ತೆಯಾಗಿ  ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದರು. ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ಸಿಐಡಿ ಕಚೇರಿಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Join Whatsapp