ಪಿಎಸ್ ಐ ನೇಮಕಾತಿ ಅಕ್ರಮ: ಮತ್ತೊಬ್ಬ ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಸೆರೆ

Prasthutha|

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾದ ರಿಸರ್ವ್ ಸಬ್ ಇನ್ಸ್ಪೆಕ್ಟರ್ (ಆರ್ ಎಸ್ ಐ) ಹಾಗೂ ಓರ್ವ ಅಭ್ಯರ್ಥಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಆರ್ ಎಸ್ ಐ ಬಸವರಾಜ್ ಗುರೋಲ್ ಹಾಗೂ ಅಭ್ಯರ್ಥಿ ನಾರಾಯಣ್ ಎಂಬುವರನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ.

- Advertisement -


ಹಲವು ವರ್ಷಗಳಿಂದ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಬಂಧಿತ ಆರೋಪಿಯಾಗಿರುವ ಡಿವೈಎಸ್ಪಿ ಶಾಂತಕುಮಾರ್ ಜೊತೆ ಬಸವರಾಜ್ ಕಾರ್ಯನಿರ್ವಹಿಸುತ್ತಿದ್ದ. ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. ತಮ್ಮ ಸಂಪರ್ಕಕ್ಕೆ ಬರುವ ಆಭ್ಯರ್ಥಿಗಳ ಜೊತೆ ಡೀಲ್ ಕುದುರಿಸಿ ಹಣದ ವಹಿವಾಟು ನಡೆಸುತ್ತಿದ್ದ. ಜೊತೆಗೆ ಸ್ಟ್ರಾಂಗ್ ರೂಮ್ ನಲ್ಲಿರಬೇಕಾದ ಒಎಂಆರ್ ಶೀಟ್ ಇರುವ ಟ್ರಂಕ್ ನ ಒನ್ ಟೈಮ್ ಲಾಕ್ ಮನೆಯಲ್ಲಿ ಪತ್ತೆಯಾಗಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುವಂತೆ ಮಾಡಿದೆ.


ಈತನೊಂದಿಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ ಐಆರ್ ನಲ್ಲಿ 12ನೇ ಆರೋಪಿಯಾಗಿರುವ ನಾರಾಯಣ್ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ಆರೋಪಿಯಾಗಿರುವ ಆರ್.ಡಿ.ಪಾಟೀಲ್ ಹಾಗೂ ದಿವ್ಯಾ ಹಾಗರಗಿ ಜೊತೆ ಹಣದ ಅವ್ಯವಹಾರ ನಡೆಸಿರುವುದು ತನಿಖೆಯಿಂದ ತಿಳಿದು ಬಂದಿದೆ. ಪಾಟೀಲ್ ಹಾಗೂ ದಿವ್ಯಾ ಹಾಗರಗಿ ಒಟ್ಟು 9 ಮಂದಿ ಆರೋಪಿಗಳಿಂದ ಲಕ್ಷಾಂತರ ರೂ ಹಣ ಪಡೆದಿದ್ದಾರೆ. ಡೀಲ್ ಗೊಳಗಾದ 9 ಮಂದಿ ಅಭ್ಯರ್ಥಿಗಳ ಪೈಕಿ 7 ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ಒಬ್ಬೊಬ್ಬ ಅಭ್ಯರ್ಥಿಯಿಂದ 40ರಿಂದ 80 ಲಕ್ಷದವರೆಗೆ ಹಣ ಪಡೆದಿರುವ ಮಾಹಿತಿ ದೊರೆತಿದ್ದು, ಬ್ಯಾಂಕ್ ನಲ್ಲಿ ಹಣ ವರ್ಗಾವಣೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -


ಮತ್ತೊಂದೆಡೆ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಆರೋಪಿಗಳಾದ ಗಜೇಂದ್ರ ಹಾಗೂ ಮನುಕುಮಾರ್ ಅಭ್ಯರ್ಥಿಗಳು ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ



Join Whatsapp