ಪಿಎಸ್ ಐ ನೇಮಕಾತಿ ಅಕ್ರಮ: ಬಂಧಿತರ ಸಂಖ್ಯೆ 39ಕ್ಕೆ ಏರಿಕೆ

Prasthutha|

ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು ಇಲ್ಲಿಯವರೆಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

- Advertisement -

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಸಂತರಾಯ್ ನರಿಬೋಳ ಬಂಧಿತ ಆರೋಪಿಯಾಗಿದ್ದು ಆತನನ್ನು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

ಬಂಧಿತ ವಸಂತರಾಯ್ ನರಿಬೋಳ ಪಿಎಸ್ ಐ ಪರೀಕ್ಷೆ ಅಭ್ಯರ್ಥಿ ಎನ್.ವಿ.ಸುನೀಲ್ ಕುಮಾರ್ ತಂದೆಯಾಗಿದ್ದು, ಸುನೀಲ್ ನನ್ನ ಪರೀಕ್ಷೆಯಲ್ಲಿ ಪಾಸ್ ಮಾಡಿಸುವುದಕ್ಕೆ ಆರ್.ಡಿ.ಪಾಟೀಲ್ ಮೊರೆ ಹೋಗಿದ್ದರು.

- Advertisement -

ಇತ್ತೀಚೆಗಷ್ಟೇ ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಪರೀಕ್ಷಾ ಅಭ್ಯರ್ಥಿಯಾಗಿದ್ದ ಶಾಂತಿಬಾಯಿ ಹಾಗೂ ಪತಿ ಬಸಯ್ಯಾ ನಾಯಕ ಎರಡು ತಿಂಗಳ ಬಳಿಕ ಸಿಐಡಿ ಬಲೆಗೆ ಬಿದ್ದಿದ್ದರು. ಹೈದರಾಬಾದ್ನಚಲ್ಲಿ ಸಿಐಡಿ ಪೊಲೀಸರು ಶಾಂತಿಬಾಯಿ ಹಾಗೂ ಆಕೆಯ ಪತಿ ಬಸಯ್ಯಾ ನಾಯಕ್ ನನ್ನು ಬಂಧಿಸಿದ್ದರು

Join Whatsapp