ಪಿಎಸ್ಐ ಹಗರಣ ಪ್ರಕರಣ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Prasthutha|

ಬೆಂಗಳೂರು: ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣದಲ್ಲಿ ದಾಖಲಾಗಿರುವ ಎಫ್ಐಆರ್ ಹಾಗೂ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಕೋರ್ಟ್ಗೆ ಒದಗಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

- Advertisement -


ಈ ಬಗ್ಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠವು ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಹಾಗೂ ಸಿಐಡಿಗೆ ನೋಟಿಸ್ ಜಾರಿಗೊಳಿಸಲು ನಿರ್ದೇಶಿಸಿದೆ.


‘ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗಿನ ವಸ್ತುಸ್ಥಿತಿ ಒಳಗೊಂಡ ಆಕ್ಷೇಪಣೆಯನ್ನು ಕೋರ್ಟ್ ಗೆ ಸಲ್ಲಿಸಿ’ ಎಂದು ಪ್ರತಿವಾದಿಗಳಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು 4 ವಾರಗಳ ಕಾಲ ಮುಂದೂಡಿದೆ.

Join Whatsapp