ಪಿಯು ಪರೀಕ್ಷಾ ಹಾಲ್ ಟಿಕೆಟ್ ನಿರಾಕರಣೆ: ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಚಿತ್ರದುರ್ಗ: ಶುಕ್ರವಾರದಿಂದ ಆರಂಭಗೊಳ್ಳುವ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ನಿರಾಕರಿಸಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ಮನೋಜ್ ಆತ್ಮಹತ್ಯೆಗೆ ಶರಣಾಗಿದ್ದು, ಉಪನ್ಯಾಸಕರ ಥಳಿತವೇ ಸಾವಿಗೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

- Advertisement -


ಕಾಲೇಜಿನ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ನಿರಾಕರಣೆ ಮಾಡಲಾಗಿದ್ದು, ಈ ಬಗ್ಗೆ ಪ್ರಶ್ನಿಸಿದ ಮನೋಜ್ ನನ್ನು ಉಪನ್ಯಾಸಕರು ವಿನಾ ಕಾರಣ ಥಳಿಸಿದ್ದಾರೆ. ಅಲ್ಲದೇ ವಿದ್ಯಾರ್ಥಿಯ ಕೂದಲು ಹಿಡಿದು ಕಾರಿಡಾರ್ ನಲ್ಲಿ ಎಳೆದಾಡಿದ್ದು, ಇದರಿಂದ ಮನನೊಂದ ಮನೋಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ’ ಎಂದು ಆತನ ಸಹಪಾಠಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಮನೋಜ್ ಶವವನ್ನು ಕಾಲೇಜು ಆವರಣಕ್ಕೆ ತಂದಿರುವ ಸಹಪಾಠಿಗಳು, ಉಪನ್ಯಾಸಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

Join Whatsapp