Home ಟಾಪ್ ಸುದ್ದಿಗಳು ಪ್ರಧಾನಿ ಮೋದಿಯನ್ನು ನಂಬಲು ಜನ ಸಿದ್ಧರಿಲ್ಲ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಪ್ರಧಾನಿ ಮೋದಿಯನ್ನು ನಂಬಲು ಜನ ಸಿದ್ಧರಿಲ್ಲ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ನವದೆಹಲಿ: ಪ್ರಧಾನಿ ಮೋದಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದ ಹೊರತಾಗಿಯೂ ದೇಶದ ಪ್ರಧಾನಿ ಮೋದಿಯನ್ನು ಜನ ನಂಬಲು ಸಿದ್ಧರಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿದ ರೈತರು ನಡೆಸುತ್ತಿದ್ದ ಪ್ರತಿಭಟನೆಗೆ ಮಣಿದು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಬಳಿಕ ಪ್ರತಿಕ್ರಿಯಿಸಿದ ರೈತರು ಕಾಯ್ದೆಗಳನ್ನು ಕಾನೂನುಬದ್ಧವಾಗಿ ರದ್ದುಗೊಳಿಸುವರೆಗೂ ಆಂದೋಲನವನ್ನು ಮುಂದುವರಿಸುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಿಂದ ಈ ಹೇಳಿಕೆ ಹೊರಬಿದ್ದಿದೆ.

ಈ ಕುರಿತು ಅವರು ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿ ಸುಳ್ಳು ಮಾತುಗಳನ್ನು ಅನುಭವಿಸಿದ ಜನರು ಸದ್ಯ ಪ್ರಧಾನಿಯ ಮಾತನ್ನು ನಂಬಲು ಸಿದ್ಧರಿಲ್ಲ. ಈ ಕಾರಣದಿಂದ ರೈತರ ಸತ್ಯಾಗ್ರಹ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನು ಬೆಂಬಲ ಮತ್ತು ಸಂಸತ್ತಿನಲ್ಲಿ ಸಾಂವಿಧಾನಿಕ ರೀತಿಯಲ್ಲಿ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂಬ ಹಿಂದಿನ ಘೋಷಣೆಯಲ್ಲಿ ರೈತರು ದೃಢವಾಗಿದ್ದಾರೆ.

Join Whatsapp
Exit mobile version