Home ಟಾಪ್ ಸುದ್ದಿಗಳು ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಬಾಲಕನ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಬಾಲಕನ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ

ಪುಣೆ: ಕಾರು ಅಪಘಾತದಲ್ಲಿ ಬಂಧಿತನಾಗಿದ್ದ ಬಾಲಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿ ಬಿಡುಗಡೆಗೆ ಆದೇಶಿಸಿದೆ. ಅಲ್ಲದೆ, ಬಾಲಾಪರಾಧಿ ನ್ಯಾಯಮಂಡಳಿಯ ಆದೇಶವನ್ನು ಅಕ್ರಮ ಎಂದು ಕೋರ್ಟ್ ವಜಾಗೊಳಿಸಿದೆ.

ಭಾರತಿ ದಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ ಪೀಠ ಬಾಲಕನಿಗೆ ಜಾಮೀನು ನೀಡಿದೆ. ಪ್ರಸ್ತುತ ಅಬ್ಸರ್ವೇಶನ್ ಹೋಮ್‌ನಲ್ಲಿರುವ ಅಪ್ರಾಪ್ತ ಬಾಲಕನನ್ನು ಬಿಡುಗಡೆ ಮಾಡುವಂತೆ ಆತನ ತಂದೆಯ ಚಿಕ್ಕಮ್ಮ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಮತ್ತು ನ್ಯಾಯಮೂರ್ತಿ ಮಂಜುಷಾ ದೇಶಪಾಂಡೆ ಅವರ ವಿಭಾಗೀಯ ಪೀಠವು ಅಂಗೀಕರಿಸಿತು. ಅಪ್ರಾಪ್ತ ಬಾಲಕನನ್ನು ಬಿಡುಗಡೆ ಮಾಡುವಂತೆ ಬಾಲ ನ್ಯಾಯ ಮಂಡಳಿಗೆ ನ್ಯಾಯಾಲಯ ಆದೇಶಿಸಿದೆ.

ಮೇ 19ರಂದು ಪುಣೆಯ ಪ್ರಮುಖ ಉದ್ಯಮಿ ಬಿಲ್ಡರ್‌‌ವೊಬ್ಬರ 17 ವರ್ಷದ ಪುತ್ರ ಮದ್ಯದ ಅಮಲಿನಲ್ಲಿ ಪೋರ್ಷೆ ಟೇಕಾನ್ ಕಾರನ್ನು ಚಾಲನೆ ಮಾಡಿದ್ದು, ಆ ವೇಳೆ ಕಲ್ಯಾಣಿ ನಗರ ಪ್ರದೇಶದಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದರು.

Join Whatsapp
Exit mobile version