ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದ ಪ್ರಕರಣ: ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

Prasthutha|

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕೆಪಿಸಿಸಿ ಆಯೋಜಿಸಿದ್ದ ‘ಕಾಂಗ್ರೆಸ್ ನಡಿಗೆ’ ಕಾರ್ಯಕ್ರಮಕ್ಕೆ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಬ್ಯಾನರನ್ನು ರಾತ್ರೋರಾತ್ರಿ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಟಿಪ್ಪು ಸುಲ್ತಾನ್ ಅವರ ಪ್ಲೆಕ್ಸ್ ಹರಿದ ಬಳಿಕ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಹಲಸೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A ಕೋಮು ಸೌಹಾರ್ದತೆಗೆ ಧಕ್ಕೆ ಹಾಗೂ 295 A ಉದ್ದೇಶಪೂರ್ವಕವಾಗಿ ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಿಪ್ಪು ಭಾವಚಿತ್ರ ಇದ್ದ ಬ್ಯಾನರ್ ಹರಿದು ಹಾಕಿದ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸ್
Join Whatsapp