Home ಟಾಪ್ ಸುದ್ದಿಗಳು ನಾಲ್ವರ ಬಾಳಲ್ಲಿ ಪುನೀತ್ “ಬೆಳಕು”: ಡಾ.ಭುಜಂಗ ಶೆಟ್ಟಿ

ನಾಲ್ವರ ಬಾಳಲ್ಲಿ ಪುನೀತ್ “ಬೆಳಕು”: ಡಾ.ಭುಜಂಗ ಶೆಟ್ಟಿ

ರಾಜ್ಯದಲ್ಲಿ ಮೊದಲ ಬಾರಿಗೆ ಈ ರೀತಿಯ ಪ್ರಯೋಗ

ಬೆಂಗಳೂರು; ಹೃದಯಾಘಾತದಿಂದ ಮೃತಪಟ್ಟ ನಟ ಪುನೀತ್ ರಾಜ್ಕುಮಾರ್ ಅವರ ನೇತ್ರ ದಾನದಿಂದ ನಾಲ್ವರು ಜಗತ್ತನ್ನು ಕಾಣುವಂತಾಗಿದೆ. ಎರಡು ಕಣ್ಣುಗಳನ್ನು ನಾಲ್ವರಿಗೆ ಹೇಗೆ ಅಳವಡಿಸಲಾಯಿತು ಎಂಬುದನ್ನು ನಾರಾಯಣ ನೇತ್ರಾಲಯದ ಮುಖ್ಯಸ್ಥ ಭುಜಂಗಶೆಟ್ಟಿ ವಿವರಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ| ಭುಜಂಗಶೆಟ್ಟಿ, ನೂತನ ತಂತ್ರಜ್ಞಾನದ ಸಹಾಯದಿಂದ ಎರಡು ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ.
ಎರಡು ಕಣ್ಣುಗಳನ್ನು ಪೂರ್ಣವಾಗಿ ಇಬ್ಬರಿಗೆ ಅಳವಡಿಸುವ ಬದಲಿಗೆ, ಬೇರೆ ಬೇರೆ ಕಾರಣಗಳಿಂದಾಗಿ ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದವರನ್ನು ಗುರುತಿಸಿ ಹೊಸ ತಂತ್ರಜ್ಞಾನದ ಮೂಲಕ ಎರಡು ಕಣ್ಣುಗಳನ್ನು ನಾಲ್ವರಿಗೆ ಅಳವಡಿಸಲಾಗಿದೆ.


ಕಣ್ಣಿಮ ಮುಂದಿನ ಭಾಗ ಒಬ್ಬರಿಗೆ, ಅದರ ಹಿಂದಿನ ಭಾಗವನ್ನು ಮತ್ತೊಬ್ಬರಿಗೆ ಜೋಡಿಸಲಾಗಿದೆ. ಹೀಗೆ ಒಂದು ಕಣ್ಣನ್ನು ಇಬ್ಬರಿಗೆ, ಮತ್ತೊಂದು ಕಣ್ಣನ್ನು ಇಬ್ಬರಿಗೆ ಸೇರಿಸಿದಂತೆ ನಾಲ್ವರಿಗೆ ಪುನೀತ್ ರಾಜ್ ಕುಮಾರ್ ಕಣ್ಣನ್ನು ಅಳವಡಿಸಲಾಗಿದೆ ಎಂದರು.


ಇದು ರಾಜ್ಯದಲ್ಲಿ ಮೊದಲನೇಯ ಬಾರಿಗೆ ಈ ರೀತಿಯ ಪ್ರಯೋಗ ನಡೆಸಲಾಗಿದೆ.
ಕಣ್ಣಿನ ತೊಂದರೆ ಅನುಭವಿಸುತ್ತಿದ್ದ ನಾಲ್ವರಿಗೆ ಒಂದೇ ದಿನದಲ್ಲಿ ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ಅಳವಡಿಸಲಾಗಿದೆ. ಶಸ್ತ್ರ ಚಿಕಿತ್ಸೆಯ ಮೂಲಕ ನಾಲ್ವರು ಅಂದರ ಭಾಳಿಗೆ ನಟ ಪುನೀತ್ ರಾಜ್ ಕುಮಾರ್ ಬೆಳಕಾಗಿದ್ದಾರೆ ಎಂದು ತಿಳಿಸಿದರು.

Join Whatsapp
Exit mobile version