Home ಟಾಪ್ ಸುದ್ದಿಗಳು ಪುನೀತ್ ಸಾವಿಗೆ ಕಂಬನಿ ಮಿಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ

ಪುನೀತ್ ಸಾವಿಗೆ ಕಂಬನಿ ಮಿಡಿದ ಅಂತಾರಾಷ್ಟ್ರೀಯ ಸುದ್ದಿವಾಹಿನಿ

►ಅತ್ಯಂತ ಪ್ರತಿಭಾನ್ವಿತ ನಟ ಎಂದ BBC

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ, ಬಿಬಿಸಿ ವಾಹಿನಿ ಸಂತಾಪ ಸೂಚಿಸಿದೆ.

ಈ ಕುರಿತು ಸುದ್ದಿ ಪ್ರಕಟಿಸಿದ ಬಿಬಿಸಿ, ಪುನೀತ್ ಅಭಿಮಾನಿಗಳೆಲ್ಲಾ ಶಾಕ್ ನಲ್ಲಿ ಇದ್ದಾರೆ. ದಿನದ ಹಿಂದಷ್ಟೇ ಅವರು ಸ್ಟೇಜ್ ನಲ್ಲಿ ಪರ್ಫಾರ್ಮ್ ಮಾಡಿದ್ದರು. ಅತ್ಯಂತ ಪ್ರತಿಭಾನ್ವಿತ ವ್ಯಕ್ತಿ ಆಗಿದ್ದರು. ಅವರ ನಿಧನದಿಂದ ಇಡೀ ಕರ್ನಾಟಕದಲ್ಲಿ ಶೋಕದ ವಾತಾವರಣ ಇದೆ. ಅಷ್ಟೊಂದು ಸಂಖ್ಯೆಯಲ್ಲಿ ಜನರು ಬರುತ್ತಿರುವುದು, ಆಸ್ಪತ್ರೆ ಆವರಣದಲ್ಲಿ ಜನರು ನಿಂತಿರುವುದು ಅವರ ಬಗ್ಗೆ ಅಭಿಮಾನಿಗಳಿಗೆ ಇದ್ದ ಪ್ರೀತಿ ತೋರಿಸುತ್ತದೆ ಎಂದು ಪರಿಸ್ಥಿತಿಯ ಬಗ್ಗೆ ಹೇಳಲಾಗಿದೆ.

Join Whatsapp
Exit mobile version