ಪುನೀತ್ ನಿಧನ: ಬೊಮ್ಮಾಯಿ, ಆರ್. ಅಶೋಕ ನಗುವ ಚಿಟ್ ಚಾಟ್ ಗೆ ವ್ಯಾಪಕ ಆಕ್ರೋಶ !

Prasthutha|

ಬೆಂಗಳೂರು: ನಿನ್ನೆ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಮುಂದೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಆರ್. ಅಶೋಕ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಇವರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

- Advertisement -

ಕನ್ನಡಿಗರ ಅಚ್ಚುಮೆಚ್ಚಿನ ಅಪ್ಪು ಹೃದಯಾಘಾತದಿಂದ ಉಸಿರು ಚೆಲ್ಲಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ರಾಜಕೀಯ ಧುರೀಣರು ಸಂತಾಪ ಸೂಚಿಸಿದ್ದಾರೆ. ಕೆಲವರು ಅಲ್ಲಿಯೇ ಇದ್ದು ಪುನೀತ್ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಆರ್. ಅಶೋಕ ಅವರು ಮೃತದೇಹದ ಮುಂದೆಯೇ ಈ ರೀತಿ ನಡೆದುಕೊಂಡಿರುವುದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಾವಿನ ಮನೆಯಲ್ಲಿ ಕೂತು ನಗುವ ಈ ಹೊಲಸು ರಾಜಕಾರಣಿಗಳನ್ನು ದೂರ ಇಡಿ ಎಂದು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Join Whatsapp