ಲಖಿಂಪುರ ಖೇರಿ ಹಿಂಸಾಚಾರಕ್ಕೆ ಮನನೊಂದು ಪಂಜಾಬ್ ನಲ್ಲಿ ರೈತನ ಆತ್ಮಹತ್ಯೆ

Prasthutha|

ಅಮೃತಸರ: ಇತ್ತೀಚೆಗೆ ಲಖಿಂಪುರ ಖೇರಿ ಹಿಂಸಾಚಾರಕ್ಕೆ ಮನನೊಂದ ರೈತರೊಬ್ಬರು ಪಂಜಾಬ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ನಡೆಸಿದ್ದಾರೆ. ಪರಮ್ ಜಿತ್ ಸಿಂಗ್ ಎಂಬವರೆ ಆತ್ಮಹತ್ಯೆಗೈದ ದುರ್ದೈವಿ.

- Advertisement -

ಪ್ರಸಕ್ತ ಅವರು ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಆಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಂದ್ರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ರೈತರ ಬೇಡಿಕೆಯ ಬಗ್ಗೆ ಸರ್ಕಾರದ ವರ್ತನೆ ಮತ್ತು ಲಖಿಂಪುರ ಖೇರಿ ಘಟನೆಯಿಂದ ಬೇಸತ್ತು ಅವರು ತಮ್ಮ ಜೀವನವನ್ನು ಕೊನೆಗೊಳಿಸುತ್ತಿರುವುದಾಗಿ ಆತ್ಮಹತ್ಯಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮೃತರು ಮೂವರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.

Join Whatsapp