ಕೆಂಪುಕೋಟೆಯಲ್ಲಿ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಪುಷ್ಪಾವತಿ ಆಯ್ಕೆ

Prasthutha|

ಹಾವೇರಿ : ಆಗಸ್ಟ್ 15ರಂದು ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪುಷ್ಪಾವತಿ ಸೋಮಪ್ಪ ಹೊನ್ನತ್ತಿ ಅವರು ಆಯ್ಕೆಯಾಗಿದ್ದಾರೆ.

- Advertisement -


ಪುಷ್ಪಾವತಿ ಅವರು ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮ ಪಂಚಾಯತ್ನಲ್ಲಿ ಮಹಿಳಾ ನೀರಗಂಟಿ (ವಾಟರ್ ವುಮನ್) ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲು ಪುಷ್ಪಾವತಿ ಅವರಿಗೆ ಅವಕಾಶ ಲಭಿಸಿದ್ದು, ಈ ಸಂಬಂಧ ಹರ್ಷ ವ್ಯಕ್ತಪಡಿಸಿದ್ದಾರೆ.


ಜಲಜೀವನ್ ಮಿಷನ್ ಯೋಜನೆಯಡಿ ಹರ್ ಘರ್ ಜಲ್ ಎಂದು ಘೋಷಣೆ ಮಾಡಿರುವ ಗ್ರಾಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಬ್ಬರ ಹೆಸರನ್ನು ಕಳುಹಿಸಲು ರಾಜ್ಯ ಸರ್ಕಾರ ಜಿಲ್ಲಾ ಪಂಚಾಯತ್ ಸಿಇಒಗೆ ಆದೇಶ ಮಾಡಿತ್ತು. ಅದರಂತೆ ಹಾವೇರಿಯ ಸಿಇಒ ಅಕ್ಷಯ ಶ್ರೀಧರ್ ಅವರು ಮಹಿಳಾ ನೀರಗಂಟಿಯಾಗಿರುವ ಪುಷ್ಪಾವತಿ ಹೆಸರು ಕಳುಹಿಸಿಕೊಟ್ಟಿದ್ದರು. ಈ ಸಂಬಂಧ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುಷ್ಪಾವತಿ ಅವರಿಗೆ ಕರೆ ಬಂದಿದೆ



Join Whatsapp