ನಿಮಗೆ ಅಧಿಕಾರ ಬೇಕಾದ್ರೆ ನನ್ನನ್ನು ಜೈಲಿಗೆ ಹಾಕಿ: ಉದ್ಧವ್ ಠಾಕ್ರೆ ಸವಾಲು

Prasthutha|

ಮುಂಬೈ: ನಿಮಗೆ ಅಧಿಕಾರ ಬೇಕಾದರೆ ನನ್ನನ್ನು ಜೈಲಿಗೆ ಹಾಕಿ. ಆದರೆ ನಮ್ಮ ಮತ್ತು ಬೇರೆ ಕುಟುಂಬ ಸದಸ್ಯರಿಗೆ ಕಿರುಕುಳ ನೀಡಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

- Advertisement -

ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಉದ್ಧವ್ ಠಾಕ್ರೆ ಸೋದರ ಮಾವ ಶ್ರೀಧರ್ ಪಾಟಂಕರ್ ಅವರ 6.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಬಗ್ಗೆ  ವಿಧಾನಸಭೆಯಲ್ಲಿ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಬಿಜೆಪಿ ನನ್ನನ್ನು ದೋಷಿಯನ್ನಾಗಿ ಮಾಡಲು ತುಂಬಾ ಪ್ರಯತ್ನ ಪಡುತ್ತಿದೆ. ಕೇಂದ್ರವು ಜಾರಿ ನಿರ್ದೇಶನಾಲಯದ ಮೂಲಕ ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಕಿಡಿಕಾರಿದರು.

ಅಧಿಕಾರಕ್ಕೆ ಬರಬೇಕಾದರೆ ಅಧಿಕಾರಕ್ಕೆ ಬನ್ನಿ. ಆದರೆ ಅಧಿಕಾರಕ್ಕೆ ಬರಲು ಇಷ್ಟೆಲ್ಲಾ ಕೆಟ್ಟ ಕೆಲಸಗಳನ್ನು ಮಾಡಬೇಡಿ. ನಮ್ಮ ಮತ್ತು ಬೇರೆ ಕುಟುಂಬ ಸದಸ್ಯರಿಗೆ ಕಿರುಕುಳ ನೀಡಬೇಡಿ. ನಿಮ್ಮ ಕುಟುಂಬದ ಸದಸ್ಯರಿಗೆ ನಾವು ಯಾವತ್ತೂ ತೊಂದರೆ ಕೊಟ್ಟಿಲ್ಲ ಎಂದು ಹೇಳಿದರು.

Join Whatsapp