ಪುತ್ತೂರು | ಸೇತುವೆಯಿಂದ ನದಿಗೆ ಬಿದ್ದ ಕಾರು: ನೀರುಪಾಲು ಶಂಕೆ

Prasthutha|


ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಉಕ್ಕಿ ಹರಿಯುತ್ತಿರುವ ಗೌರಿ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದ್ದು, ಶೋಧ ಕಾರ್ಯ ಕೈಗೊಳ್ಳಲಾಗಿದೆ.
ಪುತ್ತೂರಿನಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಅಪರಿಚಿತ ಕಾರು ತಡರಾತ್ರಿ ಬೈತಡ್ಕ ಗೌರಿಹೊಳೆಗೆ ಬಿದ್ದಿದೆ. ಈ ದೃಶ್ಯವು ಬೈತಡ್ಕ ಜುಮಾ ಮಸೀದಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರು ಯಾರದ್ದು, ಕಾರಿನಲ್ಲಿ ಎಷ್ಟು ಮಂದಿ ಇದ್ದರೆಂಬ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶೋಧ ಕಾರ್ಯ ಆರಂಭಗೊಂಡಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ.



Join Whatsapp