Home ಟಾಪ್ ಸುದ್ದಿಗಳು ಪುತ್ತೂರು ಕಾಲೇಜಿನಲ್ಲಿ ಚೂರಿ ಇರಿತ ಪ್ರಕರಣ: ವಿದ್ಯಾರ್ಥಿಗಳಿಬ್ಬರ ಮನೆಗೆ ಅಶೋಕ್‌ ಕುಮಾರ್‌ ರೈ ಭೇಟಿ

ಪುತ್ತೂರು ಕಾಲೇಜಿನಲ್ಲಿ ಚೂರಿ ಇರಿತ ಪ್ರಕರಣ: ವಿದ್ಯಾರ್ಥಿಗಳಿಬ್ಬರ ಮನೆಗೆ ಅಶೋಕ್‌ ಕುಮಾರ್‌ ರೈ ಭೇಟಿ

ಪುತ್ತೂರು: ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ಸಹ ಪಾಠಿ ವಿದ್ಯಾರ್ಥಿ ವಿರುದ್ಧ ಚೂರಿ ಇರಿತದ ಆರೋಪದ ಬಗ್ಗೆ ತನಿಖೆ ನಡೆಯು ತ್ತಿದೆ‌ನ ಈ ಮಧ್ಯೆ ಶಾಸಕ ಅಶೋಕ್‌ ಕುಮಾರ್‌ ರೈ ವಿದ್ಯಾರ್ಥಿಗಳಿಬ್ಬರ ಮನೆಗೂ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಅವರ ಮನೆಯವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಯತೀಶ್‌ ಎನ್‌. ಜೊತೆಗೆ ಶಾಸಕರು ದೂರವಾಣಿ ಮೂಲಕ ಮಾತನಾಡಿದ್ದು, ಕಾಲೇಜಿನಲ್ಲಿ ಏನು ಘಟನೆ ನಡೆದಿದೆಯೋ ಅದರ ಬಗ್ಗೆ ಕೂಲಂಕಷವಾಗಿ, ನ್ಯಾಯಯುತವಾಗಿ ತನಿಖೆ ನಡೆಸಬೇಕು. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ. ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರ ತನ್ನಿ. ಘಟನೆಯ ಬಗ್ಗೆ ಜನರಲ್ಲಿ ಯಾವುದೇ ಸಂಶಯ ಸೃಷ್ಟಿಯಾಗಬಾರದು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರ ಜೊತೆ ಅಕ್ರಮ ಸಕ್ರಮ ಸಮಿತಿ ಸದಸ್ಯ ಮಹಮ್ಮದ್‌ ಬಡಗನ್ನೂರು, ಕಬಕ ವಲಯ ಕಾಂಗ್ರೆಸ್‌ ಅಧ್ಯಕ್ಷ ನಾಸಿರ್‌ ಕೋಲ್ಪೆ, ಕಾಂಗ್ರೆಸ್‌ ಮುಖಂಡ ರೋಶನ್‌ ರೈ ಬನ್ನೂರು ಮತ್ತಿತರರು ಜೊತೆಗಿದ್ದರು‌.

Join Whatsapp
Exit mobile version