Home ಟಾಪ್ ಸುದ್ದಿಗಳು ಪುತ್ತೂರು | VHP ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ...

ಪುತ್ತೂರು | VHP ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗಿ

ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದಾರೆ.


ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು. ಸೈದ್ಧಾಂತಿಕವಾಗಿ ಕಾಂಗ್ರೆಸ್ ಅನ್ನು ವಿರೋಧಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಈ ಇಬ್ಬರು ಭಾಗವಹಿಸಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.


ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ SDPI ಕರ್ನಾಟಕ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು, ಆರ್ ಎಸ್ ಎಸ್ ಅಂಗಸಂಸ್ಥೆ ವಿಶ್ವ ಹಿಂದೂ ಪರಿಷತ್ ಕಾರ್ಯಾಲಯದ ಭೂಮಿ ಪೂಜೆಯಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕರು ಹಾಗೂ ಹಾಗೂ ಮಾಜಿ ಕಾಂಗ್ರೆಸ್ ಶಾಸಕಿ. ಜಲೀಲ್ ಕರೋಪಾಡಿಯನ್ನು ಕೊಲೆ ಮಾಡಿದ ಕೊಲೆ ಗಡುಕರನ್ನು ಹೊರ ತಂದ ವ್ಯಕ್ತಿಗಳು ಕಾಂಗ್ರೆಸ್ ಶಾಸಕರಾದರೂ ಅವರಿಗೆ RSS ಬಿಟ್ಟು ಬರಕ್ಕಾಗಲ್ಲ.. ಅಲ್ಲೇ ಇರ್ತಾರೆ… ಪುತ್ತೂರಿನ ಮುಸ್ಲಿಮರೇ ನೀವು ಧನ್ಯರು ಎಂದು ಬರೆದುಕೊಂಡಿದ್ದಾರೆ.


Join Whatsapp
Exit mobile version