Home ಟಾಪ್ ಸುದ್ದಿಗಳು ಪುತ್ತೂರು | ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತೀಕಾರ ತೀರಿಸಲು ಸ್ಕೆಚ್: ನಾಲ್ವರ ಬಂಧನ

ಪುತ್ತೂರು | ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತೀಕಾರ ತೀರಿಸಲು ಸ್ಕೆಚ್: ನಾಲ್ವರ ಬಂಧನ

ಪುತ್ತೂರು: ಕಲ್ಲೇಗ ಟೈಗರ್ಸ್ ಹುಲಿ ವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳುವ ಸಲುವಾಗಿ ಪ್ಲ್ಯಾನ್ ಮಾಡಿದ್ದ ನಾಲ್ವರನ್ನು ಪುತ್ತೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಟ್ವಾಳ ನಿವಾಸಿ ಕಿಶೋರ್ ಕಲ್ಲಡ್ಕ (36), ಪುತ್ತೂರಿನ ಮನೋಜ್ (23), ಆಶಿಕ್ (28) ಹಾಗೂ ಸನತ್ ಕುಮಾರ್ (24) ಎಂಬುವವರು ಬಂಧಿತರು.


ಅಕ್ಷಯ್ ಕಲ್ಲೇಗ ಕೊಲೆಗೆ ಪ್ರತಿಕಾರ ತಿರಿಸಿಕೊಳ್ಳಲು ಹತ್ಯೆಯ ಆರೋಪಿ ಮನೀಶ್ ಸಹೋದರ ಮನೋಜ್ ಎಂಬುವವರಿಗೆ ಬೆದರಿಕೆ ಕರೆ ಮಾಡಿದ್ದರು. ಈ ಹಿನ್ನಲೆ ಮನೋಜ್ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು.


ಪುತ್ತೂರಿನ ಮುಕ್ರಂಪಾಡಿಯಲ್ಲಿ ಕಾರಿನಲ್ಲಿ ನಾಲ್ವರು ದುಷ್ಕರ್ಮಿಗಳ ತಂಡ ತಲ್ವಾರ್ ಸಹಿತ ಅವಿತ್ತಿದ್ದರು. ಸದ್ಯ ಕಾರು, ತಲ್ವಾರ್ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು, ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.

Join Whatsapp
Exit mobile version