ಪುತ್ತೂರು: ಕಾರು ಪಲ್ಟಿಯಾಗಿ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಮೃತ್ಯು

Prasthutha|

ಪುತ್ತೂರು: ಕಾರೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಫೆ.14ರಂದು ರಾತ್ರಿ ತಾಲೂಕಿನ ಸಂಟ್ಯಾರ್‌ನಲ್ಲಿ ನಡೆದಿದೆ.

- Advertisement -

ಅಪಘಾತದಲ್ಲಿ ಮೃತಪಟ್ಟ ಕಾರು ಚಾಲಕನನ್ನು ನಿಡ್ಪಳ್ಳಿ ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯರಾದ ಮುಂಡೂರು ನಿವಾಸಿ ಮುರಳೀಧರ್ ಭಟ್ ಎಂದು ಗುರುತಿಸಲಾಗಿದೆ.

ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

- Advertisement -

KA 21 P 5049 ನೋಂದಣಿಯ ಫಾರ್ಡ್ ಕಂಪನಿಯ ಕಾರು ಬೆಟ್ಟಂಪಾಡಿ ಕಡೆ ಹೋಗುವಾಗ ವಿದ್ಯುತ್ ಕಂಬಕ್ಕೆ ಬಡಿದು ತೋಟಕ್ಕೆ ಬಿದ್ದಿದೆ.

ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Join Whatsapp