Home ಟಾಪ್ ಸುದ್ದಿಗಳು ಪುತ್ತೂರು: ಪ್ರೇಯಸಿಯ ಕತ್ತು ಸೀಳಿದ ಪ್ರೇಮಿ !

ಪುತ್ತೂರು: ಪ್ರೇಯಸಿಯ ಕತ್ತು ಸೀಳಿದ ಪ್ರೇಮಿ !

►ಪೊಲೀಸ್ ದೂರು ನೀಡಲು ಹೋದ ಯುವತಿಯನ್ನು ಕೊಲೆಗೈದ ಕಿರಾತಕ !


ಪುತ್ತೂರು: ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.


ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಬಂಧಿತ ಆರೋಪಿಯಾಗಿದ್ದು, ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ (18) ಮೃತ ಯುವತಿ.

ಪುತ್ತೂರಿನ ವಸ್ತ್ರ ಮಳಿಗೆಯೊಂದರಲ್ಲಿ ಗೌರಿ ಕೆಲಸ ಮಾಡುತ್ತಿದ್ದಳು. ಗೌರಿ ಮತ್ತು ಪದ್ಮರಾಜ್ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪದ್ಮರಾಜ್ ಮತ್ತು ಗೌರಿ ನಡುವೆ ಹಲವು ಬಾರಿ ಯಾವುದೊ ವಿಚಾರಕ್ಕೆ ಗಲಾಟೆ ನಡೆದಿತ್ತು. ಗುರುವಾರವೂ ಕೂಡ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ಮತ್ತೆ ಗಲಾಟೆ ಶುರುವಾಗಿದೆ.

ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಚಾಕುವಿನಿಂದ 3 ರಿಂದ ನಾಲ್ಕು ಬಾರಿ ಇರಿದು ಗಂಭಿರವಾಗಿ ಗಾಯಗೊಳಿಸಿದ್ದಾನೆ. ಬಳಿಕ ಬೈಕನ್ನು ಘಟನಾ ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾನೆ. ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version