ಪುತ್ತೂರು | ಯುವತಿಗೆ ಚೂರಿ ಇರಿದ ಪ್ರಕರಣ: ಆರೋಪಿ ಬಂಧನ

Prasthutha|

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಯುವತಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವಿಟ್ಲ ಸಮೀಪದ ಅಳಿಕೆ ನಿವಾಸಿ ಗೌರಿ (18) ಚೂರಿ ಇರಿತಕ್ಕೆ ಒಳಗಾದವರು.


ಗುರುವಾರ ಮಾಧ್ಯಾಹ್ನ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿ ಪದ್ಮರಾಜ್ ಚಾಕುವಿನಿಂದ 3 ರಿಂದ ನಾಲ್ಕು ಬಾರಿ ಇರಿದು ಗಂಭಿರವಾಗಿ ಗಾಯಗೊಳಿಸಿದ್ದಾನೆ. ಬಳಿಕ ಬೈಕನ್ನು ಘಟನಾ ಸ್ಥಳದಲ್ಲೆ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ.

- Advertisement -


ಜೀವನ್ಮರಣ ಸ್ಥಿತಿಯಲ್ಲಿರುವ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.



Join Whatsapp