ಪುತ್ತೂರು: SDPI ಕಾರ್ಯಕರ್ತರ ಬೃಹತ್ ಸಮಾವೇಶ

Prasthutha|

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಭೆಯು ಪುತ್ತೂರಿನ ಎಂ.ಡಿ.ಎಸ್ ಟ್ರಿನಿಟಿ ಹಾಲ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಪ್ರಸಕ್ತ ಸನ್ನಿವೇಶದಲ್ಲಿ ಎಸ್‌ಡಿಪಿಐ ಪಕ್ಷದ ಅನಿವಾರ್ಯತೆ ಮತ್ತು ಚುನಾವಣಾ ರಾಜಕೀಯದಲ್ಲಿ ಪಕ್ಷದ ಪಾಲ್ಗೊಳ್ಳುವಿಕೆ ಅನಿವಾರ್ಯ ಯಾಕೆ ಎಂಬುದರ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಅದೆ ರೀತಿ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

- Advertisement -

ಎಸ್‌ಡಿಪಿಐ ರಾಜ್ಯ ಪ್ರ.ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಸಮಾರೋಪ ಭಾಷಣ ಮಾಡಿದರು.

ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಾಸ್ತಾವಿಕ ವಾಗಿ ಮಾತನಾಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರನ್ನು ಪುತ್ತೂರು ವಿಧಾನಸಭಾ ಸಮಿತಿಯ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.

ವೇದಿಕೆಯಲ್ಲಿ ‌ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಸಿದ್ದೀಕ್ ಕೆ.ಎ ಪುತ್ತೂರು, ದ.ಕ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಅಶ್ರಫ್ ಬಾವು, ಸಮಿತಿ ಸದಸ್ಯರಾದ ವಿಶ್ವನಾಥ ಪುಂಚತ್ತಾರು, ಯೆಹ್ಯಾ ಕೂರ್ನಡ್ಕ, ಪಿಬಿಕೆ ಮಹಮ್ಮದ್, ಎಸ್.ಡಿ‌.ಟಿ.ಯು ಅಧ್ಯಕ್ಷರಾದ ಜುನೈದ್ ಸಾಲ್ಮರ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಪುತ್ತೂರು ವಿಧಾನಸಭಾ ಕ್ಷೇತ್ರ‌ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪುತ್ತೂರು ಸ್ವಾಗತಿಸಿ, ಉಪಾಧ್ಯಕ್ಷ ಹಮೀದ್ ಸಾಲ್ಮರ ಧನ್ಯವಾದಗೈದರು.
ಉಸ್ಮಾನ್ ಪುತ್ತೂರು ಹಾಗೂ ಫಾರೂಕ್ ಕಬಕ ಕಾರ್ಯಕ್ರಮ ‌ನಿರೂಪಿಸಿದರು.

Join Whatsapp