Home ಟಾಪ್ ಸುದ್ದಿಗಳು ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಹತ್ಯೆ: ಬಂಧಿತರನ್ನು ಸ್ಥಳ ಮಹಜರಿಗೆ ಕರೆ ತಂದ ಪೊಲೀಸರು

ಪುತ್ತೂರಿನಲ್ಲಿ ಅಕ್ಷಯ್ ಕಲ್ಲೇಗ ಹತ್ಯೆ: ಬಂಧಿತರನ್ನು ಸ್ಥಳ ಮಹಜರಿಗೆ ಕರೆ ತಂದ ಪೊಲೀಸರು

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಸ್ಥಳ ಮಹಜರು‌ ನಡೆಸಿದರು.

ಪ್ರಮುಖ ಆರೋಪಿಗಳಾದ ಮನೀಶ್ ಮತ್ತು ಚೇತನ್ ಕೊಲೆ ನಡೆಸಿದ ಸ್ಥಳದಿಂದ ನೇರವಾಗಿ ಪುತ್ತೂರು ನಗರ ಠಾಣೆಗೆ ಆಗಮಿಸಿ ಪೊಲೀಸರಿಗೆ ಶರಣಾಗಿದ್ದರು. ಉಳಿದ ಇಬ್ಬರು ಆರೋಪಿಗಳಾದ ಕೇಶವ ಪಡೀಲು ಮತ್ತು ಮಂಜುನಾಥ ಯಾನೆ ಮಂಜು ಎಂಬವರನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೊಲೆ ನಡೆಸಲಾದ ಸ್ಥಳಕ್ಕೆ ಕರೆತಂದು ಪೊಲೀಸರು ಮಂಗಳವಾರ ಸಂಜೆ ಸ್ಥಳದ ಮಹಜರು ನಡೆಸಿದರು.

ಕ್ಷುಲ್ಲಕ ಕಾರಣಕ್ಕಾಗಿ ಅಕ್ಷಯ್ ಕಲ್ಲೇಗ ಅವರನ್ನು ತಂಡವೊಂದು ಅಟ್ಟಾಡಿಸಿ ತಲವಾರಿನಿಂದ ಕಡಿದು ಕೊಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರೂನಗರ ಎಂಬಲ್ಲಿ ಸೋಮವಾರ ತಡರಾತ್ರಿ ನಡೆದಿತ್ತು.

Join Whatsapp
Exit mobile version