ಪುತ್ತೂರು | ಹೆಬ್ಬಾವು ಕೊಂದ ಪ್ರಕರಣ: ಇಬ್ಬರ ಬಂಧನ

Prasthutha|

ಪುತ್ತೂರು: ಹೆಬ್ಬಾವು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶೇಡಿಗುರಿ ನಿವಾಸಿ ಧನಂಜಯ (38) ಮತ್ತು ಜಯ(36) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

- Advertisement -


ಇವರು ತಮ್ಮ ಮನೆಗೆ ಬಂದಿದ್ದ ಹೆಬ್ಬಾವನ್ನು ಕೊಂದು ಪೆರ್ಲಂಪಾಡಿಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿ ಹಾಕಿದ್ದರು. ಹೆಬ್ಬಾವನ್ನು ಕೊಲ್ಲುವುದು 1972ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗಿರುವ ಕಾರಣ ಪ್ರಕರಣ ಪತ್ತೆ ಹಚ್ಚಿದ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.



Join Whatsapp