ಗೆಳೆಯರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

Prasthutha|

ಬೆಂಗಳೂರು: ಹೆಡ್’ಫೋನ್ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -


ತಮಿಳುನಾಡು ಮೂಲದ ಕಾರ್ತಿಕ್(27) ಕೊಲೆಯಾದ ಯುವಕ. ಈ ಸಂಬಂಧ ಸ್ನೇಹಿತರಾದ ರಜನೀಶ್ ಮತ್ತು ರವಿ ಎಂಬವರನ್ನು ಬಂಧಿಸಲಾಗಿದೆ.


ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯವರಾದ ಕಾರ್ತಿಕ್, ರಜನೀಶ್ ಮತ್ತು ರವಿ ದೊಡ್ಡನಾಗಮಂಗಲದ ಬಾಲಾಜಿ ಲೇಔಟ್’ನಲ್ಲಿ ನಿರ್ಮಾಣ ಹಂತದ ಮನೆಯಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದು, . ಅಲ್ಲಿಯೇ ವಾಸವಾಗಿದ್ದರು. ಡಿ.31ರಂದು ಆರೋಪಿ ರಜನೀಶ್ ಹುಟ್ಟುಹಬ್ಬ ಹಾಗೂ ಹೊಸವರ್ಷದ ಸಂಭ್ರಮಾಚರಣೆಗಾಗಿ ನಿರ್ಮಾಣ ಹಂತದ ಕಟ್ಟಡದಲ್ಲೇ ಕಾರ್ತಿಕ್, ರವಿ ಹಾಗೂ ಇತರರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಎಲ್ಲರೂ ಕಂಠಪೂರ್ತಿ ಮದ್ಯ ಸೇವಿಸಿದ್ದು, ರಜನೀಶ್’ನ ಹೆಡ್’ಫೋನ್ ಅನ್ನು ಕಾರ್ತಿಕ್ ತೆಗೆದುಕೊಂಡಿದ್ದ.

- Advertisement -


ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದ್ದು, ಈ ವೇಳೆ ರಜನೀಶ್ ಸಹಾಯಕ್ಕೆ ಬಂದ ರವಿ ಹಾಗೂ ಇತರರು ಕಾರ್ತಿಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಕೈ ಮತ್ತು ಕಾಲುಗಳಲ್ಲೇ ಕಾರ್ತಿಕ್ ಮೇಲೆ ಮನಸೋ ಇಚ್ಚೆ ಥಳಿಸಿ, ಎಲ್ಲರೂ ಮಲಗಲು ಹೋಗಿದ್ದರು.


ಮರು ದಿನ ಬೆಳಗ್ಗೆ ಕಾರ್ತಿಕ್ ಎಚ್ಚರಗೊಳ್ಳದ್ದನ್ನು ಕಂಡ ಇತರ ಕಾರ್ಮಿಕರು ಕಾರ್ತಿಕ್’ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp