ಗೆಳೆಯರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

Prasthutha|

ಚಿಕ್ಕಮಗಳೂರು: ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ಮಧ್ಯೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ  ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ.

- Advertisement -

ಓಂಕಾರ (30) ಮೃತ ದುರ್ದೈವಿ. ರಾತ್ರಿ ಮನೆಯಲ್ಲಿದ್ದ ಓಂಕಾರನನ್ನು ಕರೆದುಕೊಂಡು ಹೋದ ಸ್ನೇಹಿತರು ಕೊಲೆ ಮಾಡಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

ಆರೋಪಿಗಳ ತಂಡದಲ್ಲಿ ಒಟ್ಟು ಐದು ಮಂದಿಯಿದ್ದು ಸುನೀಲ್, ಸಂತೋಷ್, ಧನರಾಜ್ ಎಂಬ ಮೂವರನ್ನು  ಬಂಧಿಸಲಾಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ.

Join Whatsapp