ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ| ಯುವಕನ ಬರ್ಬರ ಹತ್ಯೆ

Prasthutha|

- Advertisement -

- Advertisement -

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ.

ರಾತ್ರಿ ಮನೆ ಬಳಿಗೆ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು, ಎರಡು ಕುಟುಂಬದವರ ನಡುವೆ ಮಾರಾಮಾರಿ ನಡೆದು ಇಸ್ಮಾಯಿಲ್‌ನನ್ನು ಡ್ರಾಗರ್​ನಿಂದ ಇರಿದು ಹತ್ಯೆಗೈಯ್ಯಲಾಗಿದೆ.

ಇಸ್ಮಾಯಿಲ್ ಖಾನ್​ಗೆ ಡ್ರಾಗರ್​ನಿಂದ ಇರಿದ ಪರಿಣಾಮ ಯುವಕ ತೀವ್ರ ರಕ್ತ ಸ್ರಾವದಿಂದ ಒದ್ದಾಡಿದ್ದು ನಂತರ ಕಾರಿನಲ್ಲಿ ಆಸ್ವತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲೆ ತೀವ್ರ ರಕ್ತ ಸ್ರಾವವಾದ ಕಾರಣ ಇಸ್ಮಾಯಿಲ್ ಖಾನ್ ಮೃತಪಟ್ಟಿದ್ದಾರೆ.

Join Whatsapp