ಆರ್.ಅಶೋಕ್‌ ಗೆ ಕೋವಿಡ್ ಪಾಸಿಟಿವ್‌: ಆಸ್ಪತ್ರೆಗೆ ದಾಖಲು !

Prasthutha|

ಬೆಂಗಳೂರು: ಕೊರೋನಾ ಮೂರನೇ ಅಲೆ ಇದೀಗ ವಿಧಾನಸೌಧಕ್ಕೆ ಕಾಲಿಟ್ಟಿದ್ದು, ಕಂದಾಯ ಸಚಿವ ಆರ್.ಅಶೋಕ್‌ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಲಘು ರೋಗಲಕ್ಷಣಗಳ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಚಿವರು ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ.

- Advertisement -

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದ ಕೋವಿಡ್ ಸಭೆಯಲ್ಲಿ ಭಾಗವಹಿಸಿದ್ದ ಆರ್.ಅಶೋಕ್‌ ಗೆ ಇದೀಗ ಕೊರೊನಾ ಸೋಂಕು ತಗುಲಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೋಂ ಐಸೋಲೇಷನ್ ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp